ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಬಡವರು ಲಂಚ ಕೊಡದ ಹೊರತು ಕೆಲಸ ಕಾರ್ಯಗಳು ಆಗುವುದಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.
ಲೋಕಾಯುಕ್ತರು ಸರ್ಕಾರಿ ಅಧಿಕಾರಗಳ ಮನೆಯ ಮೇಲೆ ದಾಳಿ ನಡೆಸಿದಾಗ ಕಂತೆಗಟ್ಟಲೆ ಹಣ, ಆದಾಯವನ್ನು ಮೀರಿದ ಆಸ್ತಿ ಎಲ್ಲವೂ ಪತ್ತೆಯಾಗುತ್ತಿದೆ. ಲಕ್ಷಾಂತರ ರೂ. ಸಂಬಳ ಪಡೆಯುವವರೂ ಲಂಚಕ್ಕೆ ಕೈಯೊಡ್ಡುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರ ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕುವ ಮೂಲಕ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಜಾರಿಗೆ ತರಬೇಕು.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು





