Andolana originals

ಓದುಗರ ಪತ್ರ| ಪಾಳು ಬಿದ್ದ ಕಟ್ಟಡಗಳು ಸದ್ಬಳಕೆಯಾಗಲಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಸಮೀಪದಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರಿ ಗಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ 8 ವಾಸದ ಮನೆಗಳನ್ನು ನಿರ್ಮಿಸಲಾಗಿದೆ.

2011-12ನೇ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2 ಕಟ್ಟಡಗಳಲ್ಲಿ 8 ಮನೆಗಳನ್ನು ನಿರ್ಮಿಸಲಾಯಿತು. ಈ ಕಟ್ಟಡಗಳು ನಿರ್ಮಾಣವಾದ ಆರಂಭದ ಒಂದೆರಡು
ವರ್ಷಗಳನ್ನು ಹೊರತುಪಡಿಸಿದರೆ ಉಳಿದ 10-12 ವರ್ಷಗಳಿಂದ ಈ ಮನೆಗಳು ಖಾಲಿ ಬಿದ್ದಿವೆ. ಈ ಕಟ್ಟಡಗಳಿಗೆ ಸಮರ್ಪಕವಾದ ಮೂಲಸೌಕರ್ಯಗಳನ್ನು ಒದಗಿಸದ ಪರಿಣಾಮ ಈ ಮನೆಗಳಲ್ಲಿ ಯಾರೂ ವಾಸಿಸಲು ಸಾಧ್ಯವಾಗದೆ ಪಾಳು ಬಿದ್ದಿವೆ.

ಕೆಲ ವರ್ಷಗಳ ಹಿಂದೆ 8 ಮನೆಗಳ ಪೈಕಿ 4 ಮನೆಗಳನ್ನು ಸುಮಾರು 4,50,000 ರೂ. ವೆಚ್ಚದಲ್ಲಿ ರಿಪೇರಿ ಮಾಡಲಾಯಿತು. ಆದಾಗ್ಯೂ ಸೌಕರ್ಯಗಳ ಕೊರತೆಯಿಂದಾಗಿ ಈಗ ಈ ಮನೆಗಳು ಮತ್ತೆ ಪಾಳು ಬೀಳುವಂತಾಗಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಈ ಕಟ್ಟಡಗಳ ಸದ್ಬಳಕೆಗೆ ಕ್ರಮವಹಿಸಬೇಕಿದೆ.

-ಪ್ರಶಾಂತ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

3 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

10 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

10 hours ago