Andolana originals

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿರುವುದಾಗಿ ಮೈಸೂರು ರೈಲ್ವೆ ಇಲಾಖೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಮೈಸೂರು ವಿಭಾಗದಲ್ಲಿ ಇತಿಹಾಸದ ಅತಿ ಹೆಚ್ಚು ಆದಾಯ ಗಳಿಸಿರುವುದಾಗಿ ಹೇಳಿದ್ದಾರೆ. ಇದು ಇಲಾಖೆಗೆ ಸಂತೋಷಕರ ವಿಚಾರವಾಗಿ ರಬಹುದು. ಇದೇ ರೀತಿ ಹಲವು ರೈಲ್ವೆ ವಿಭಾಗಗಳು ಲಾಭ ಗಳಿಸಿರಬಹುದು. ಆದರೆ ರೈಲ್ವೆ ಇಲಾಖೆಯು ಕಳೆದ ಹದಿನೈದು ವರ್ಷಗಳಿಂದ ಹಿರಿಯ ನಾಗರಿಕರಿಗೆ ರೈಲ್ವೇ ಪ್ರಮಾಣದಲ್ಲಿ ನೀಡುತ್ತಿದ್ದ ಶೇ.೩೦ ರಷ್ಟು ರಿಯಾಯಿತಿಯನ್ನು ಕಳೆದ ಐದು ವರ್ಷಗಳಿಂದ ಅಂದರೆ ದೇಶದಲ್ಲಿ ಕೊರೋನ ಸಾಂಕ್ರಾಮಿಕ ರೋಗ ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲಿ ಹಿರಿಯ ನಾಗರಿಕರ ಈ ರಿಯಾಯಿತಿ ದರವನ್ನು ರದ್ದುಪಡಿಸಿತು. ಈಗ ದೇಶದಲ್ಲಿ ಕೊರೋನ ಮಾಯವಾಗಿ ಐದು ವರ್ಷಗಳೇ ಕಳೆದಿವೆ. ರೈಲ್ವೆ ಎಲ್ಲ ವಿಭಾಗಗಳು ನೂರಾರು ಕೋಟಿ ರೂ.ಲಾಭದಲ್ಲಿವೆ. ಆದರೂ ಹಿರಿಯ ನಾಗರಿಕರಿಗೆ ಇಲಾಖೆಯು ಹಿಂದೆ ಇದ್ದ ರಿಯಾಯಿತಿ ದರವನ್ನು ನೀಡುತ್ತಿಲ್ಲ. ರೈಲ್ವೆ ಸಚಿವರು ಈ ಬಗ್ಗೆ ತುರ್ತು ಗಮನಹರಿಸಿ ಈ ಹಿಂದೆ ನೀಡುತ್ತಿದ್ದ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ಮತ್ತೆ ರಿಯಾಯಿತಿ ಸೌಲಭ್ಯ ಮುಂದುವರಿಯುಂತೆ ಕ್ರಮ ಕೈಗೊಳ್ಳಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

21 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

28 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

35 mins ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

40 mins ago

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

13 hours ago