ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು ಆದಾಯ ಗಳಿಸಿರುವುದಾಗಿ ಮೈಸೂರು ರೈಲ್ವೆ ಇಲಾಖೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ಮೈಸೂರು ವಿಭಾಗದಲ್ಲಿ ಇತಿಹಾಸದ ಅತಿ ಹೆಚ್ಚು ಆದಾಯ ಗಳಿಸಿರುವುದಾಗಿ ಹೇಳಿದ್ದಾರೆ. ಇದು ಇಲಾಖೆಗೆ ಸಂತೋಷಕರ ವಿಚಾರವಾಗಿ ರಬಹುದು. ಇದೇ ರೀತಿ ಹಲವು ರೈಲ್ವೆ ವಿಭಾಗಗಳು ಲಾಭ ಗಳಿಸಿರಬಹುದು. ಆದರೆ ರೈಲ್ವೆ ಇಲಾಖೆಯು ಕಳೆದ ಹದಿನೈದು ವರ್ಷಗಳಿಂದ ಹಿರಿಯ ನಾಗರಿಕರಿಗೆ ರೈಲ್ವೇ ಪ್ರಮಾಣದಲ್ಲಿ ನೀಡುತ್ತಿದ್ದ ಶೇ.೩೦ ರಷ್ಟು ರಿಯಾಯಿತಿಯನ್ನು ಕಳೆದ ಐದು ವರ್ಷಗಳಿಂದ ಅಂದರೆ ದೇಶದಲ್ಲಿ ಕೊರೋನ ಸಾಂಕ್ರಾಮಿಕ ರೋಗ ದೇಶದಲ್ಲಿ ಕಾಣಿಸಿಕೊಂಡ ಸಂದರ್ಭದಲ್ಲಿ ಹಿರಿಯ ನಾಗರಿಕರ ಈ ರಿಯಾಯಿತಿ ದರವನ್ನು ರದ್ದುಪಡಿಸಿತು. ಈಗ ದೇಶದಲ್ಲಿ ಕೊರೋನ ಮಾಯವಾಗಿ ಐದು ವರ್ಷಗಳೇ ಕಳೆದಿವೆ. ರೈಲ್ವೆ ಎಲ್ಲ ವಿಭಾಗಗಳು ನೂರಾರು ಕೋಟಿ ರೂ.ಲಾಭದಲ್ಲಿವೆ. ಆದರೂ ಹಿರಿಯ ನಾಗರಿಕರಿಗೆ ಇಲಾಖೆಯು ಹಿಂದೆ ಇದ್ದ ರಿಯಾಯಿತಿ ದರವನ್ನು ನೀಡುತ್ತಿಲ್ಲ. ರೈಲ್ವೆ ಸಚಿವರು ಈ ಬಗ್ಗೆ ತುರ್ತು ಗಮನಹರಿಸಿ ಈ ಹಿಂದೆ ನೀಡುತ್ತಿದ್ದ ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣದಲ್ಲಿ ಮತ್ತೆ ರಿಯಾಯಿತಿ ಸೌಲಭ್ಯ ಮುಂದುವರಿಯುಂತೆ ಕ್ರಮ ಕೈಗೊಳ್ಳಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…