ಓದುಗರ ಪತ್ರ
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ ಉಳಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಪಾರ್ಕ್ ಮಾದರಿಯಲ್ಲೇ ಇಲ್ಲೂ ಪಾರ್ಕ್ ನಿರ್ಮಿಸಿ ದರೆ ಜನರಿಗೆ ‘ಜಲ ಸಾಕ್ಷರತೆ’ ದೊರೆಯುತ್ತಿತ್ತು. ಆದರೆ, ಆಳುವವರ ಇಚ್ಛಾಶಕ್ತಿಯ ಕೊರತೆಯಿಂದ ಈ ಯೋಜನೆ ನನೆಗುದಿಗೆ ಬಿದ್ದಿದೆ.
ಅಂಕಿ ಅಂಶಗಳ ಪ್ರಕಾರ, ನಗರೀಕರಣದ ಹೆಸರಿನಲ್ಲಿ ಮೈಸೂರಿನ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ನಗರದಲ್ಲಿ ಬೀಳುವ ಮಳೆಯಲ್ಲಿ ಶೇ. ೪೦ಕ್ಕೂ ಹೆಚ್ಚು ಪ್ರಮಾಣದ ನೀರು ಪೋಲಾಗಿ ಚರಂಡಿ ಸೇರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ, ಜನರಲ್ಲಿ ಜಾಗೃತಿ ಮೂಡಿಸಬೇಕಾದ ಸರ್ಕಾರ ಕೇವಲ ಬಜೆಟ್ ಭಾಷಣಗಳಿಗೆ ಸೀಮಿತವಾಗಿರುವುದು ದುರಂತ. ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತು ತಕ್ಷಣವೇ ಥೀಮ್ ಪಾರ್ಕ್ ಕಾಮಗಾರಿಯನ್ನು ಆರಂಭಿಸಲಿ.
– ಡಾ. ಎಚ್.ಕೆ.ವಿಜಯಕುಮಾರ,ಬೆಂಗಳೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…