ಓದುಗರ ಪತ್ರ
ಮಾಧ್ಯಮವೊಂದರ ವರದಿ ಪ್ರಕಾರ ಮೌಲ್ಯಾಧಾರಿತ ರಾಜಕಾರಣಿ ಎಂದೇ ಹೆಸರಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ತಮ್ಮ ವೈದ್ಯಕೀಯ ಆರೈಕೆಗಾಗಿ ೪೦ ಲಕ್ಷ ರೂ.ಗಳನ್ನು ಹೊಂದಿಸಲಾಗದೆ ತಮಗೆ ಪಿತ್ರಾರ್ಜಿತವಾಗಿ ಬಂದಿದ್ದ ತೋಟವನ್ನು ಮಾರಲು ಸಿದ್ಧರಾಗಿದ್ದರಂತೆ. ಇದನ್ನು ತಿಳಿದ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು ರಾಮಕೃಷ್ಣ ಹೆಗಡೆಯವರ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಸರ್ಕಾರದಿಂದ ಹಣ ಮಂಜೂರು ಮಾಡಿ ಲಂಡನ್ನಲ್ಲಿ ಚಿಕಿತ್ಸೆ ಕೊಡಿಸಿದರಂತೆ. ಇದರಲ್ಲಿ ಎಸ್.ಎಂ.ಕೃಷ್ಣರವರ ಹೃದಯವಂತಿಕೆಯ ಜತೆಗೆ ಐದು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿದ್ದು, ಮೂರು ಬಾರಿ ಮುಖ್ಯಮಂತ್ರಿಯಾಗಿದ್ದರೂ ಹೆಗಡೆಯವರು ತಮ್ಮ ಕೊನೆಗಾಲದಲ್ಲಿ ವೈದ್ಯಕೀಯ ವೆಚ್ಚ ಭರಿಸಲು ಹೆಣಗಾಡಬೇಕಾಗಿ ಬಂದಿದ್ದು, ಅವರಲ್ಲಿನ ಪ್ರಾಮಾಣಿಕತೆಗೆ ಹಿಡಿದ ಕನ್ನಡಿಯಾಗಿದೆ. ಅಂದಿನ ರಾಜಕಾರಣಿಗಳ ಮೌಲ್ಯಯುತ ಬದುಕು ಇಂದಿನ ರಾಜಕಾರಣಿಗಳ ಕಣ್ಣು ತೆರೆಸಬೇಕು. ಪಂಚಾಯಿತಿಯಿಂದ ಪಾರ್ಲಿಮೆಂಟ್ವರೆಗೆ ಜನಪ್ರತಿನಿಧಿಯಾದವರೆಲ್ಲರೂ ಐಶಾರಾಮಿ ಜೀವನ ಮಾಡುತ್ತಿರುವಾಗ ರಾಜಕಾರಣಿಯಾದವರ ಬದುಕು ಹೇಗೆ ಮಾದರಿಯಾಗಿರಬೇಕು ಎಂದು ತೋರಿಸಿದವರು ಹೆಗಡೆಯವರು. ಇಂತಹ ಅಪರೂಪದ ರಾಜಕಾರಣಿಯ ವಿರುದ್ಧ ಕೇಳಿಬಂದ ದೂರವಾಣಿ ಕದ್ದಾಲಿಕೆ ಆರೋಪವನ್ನೇ ಮುಂದಿಟ್ಟುಕೊಂಡು ಅದನ್ನೇ ಮಹಾಪರಾಧವೆಂದು ಬಿಂಬಿಸಿ ರಾಜಕೀಯದಿಂದ ಅವರನ್ನು ಬದಿಗೆ ಸರಿಸಲು ಪ್ರಯತ್ನಿಸಿದವರು, ಅವರ ಪ್ರಾಮಾಣಿಕ ಬದುಕನ್ನು ನೋಡದಿದ್ದದ್ದು ಬೇಸರದ ಸಂಗತಿ. ಹಂಗಾಮಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ಗುಲ್ಜಾರಿಲಾಲ್ ನಂದಾ ಅವರೂ ಕೂಡ ಇದೇ ಪರಿಸ್ಥಿತಿ ಅನುಭವಿಸಿದ್ದರು.
–ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…