Andolana originals

ಓದುಗರ ಪತ್ರ| ರಸ್ತೆಗಳನ್ನು ಮರುಡಾಂಬರೀಕರಣ ಮಾಡಿ

ಕೊಳ್ಳೇಗಾಲದ ಪ್ರಮುಖ ರಸ್ತೆಗಳಾದ ಡಾ.ಬಿ.ಆರ್.ಅಂಬೇಡ್ಕ‌ರ್ ರಸ್ತೆ ಮತ್ತು ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳು ಕಾಣದೆ ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೆ ಗುಂಡಿ ತಪ್ಪಿಸಲು ಹೋಗಿ ಅನೇಕ ಅಪಘಾತಗಳೂ ಸಂಭವಿಸಿರುವ ಉದಾಹರಣೆಗಳಿವೆ.

ಈ ಗುಂಡಿಗಳಲ್ಲಿ ಸದಾ ನೀರು ನಿಂತಿರುವುದರಿಂದ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದರಿಂದಾಗಿ ಸ್ಥಳೀಯರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಈ ಎರಡೂ ರಸ್ತೆಗಳು ಕೊಳ್ಳೇಗಾಲದ ಪ್ರಮುಖ ರಸ್ತೆಗಳಾಗಿದ್ದು, ಇಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಿರುವುದರಿಂದ ಇವು ಜನನಿಬಿಡ ಪ್ರದೇಶಗಳೂ ಆಗಿವೆ. ಹೀಗಾಗಿ ಇಲ್ಲಿ ವಾಹನಗಳ ಸಂಚಾರವೂ ಹೆಚ್ಚಾಗಿದೆ. ಈ ವೇಳೆ ವಾಹನಗಳು ಚಲಿಸಿದಂತೆಲ್ಲ ಗುಂಡಿಗಳಲ್ಲಿನ ನೀರು ಪಾದಚಾರಿಗಳಿಗೆ ಎರಚುತ್ತಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಕರವಾಗಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅನೇಕ ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ಈ ರಸ್ತೆಗಳನ್ನು ಮರುಡಾಂಬರೀಕರಣ ಮಾಡಬೇಕಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

10 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

28 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

47 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago