Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ಓದುಗರ ಪತ್ರ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜ ರಾಪು ರಾಮಮೋಹನ್ ನಾಯ್ಡು ಅವರಿಗೆ ಮನವಿ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ ಮೈಸೂರಿಗೆ ಉತ್ತಮ ವಾಯು ಸಂಪರ್ಕ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದಿರುವುದು ಖುಷಿಯ ವಿಷಯ.

ರಾಜ್ಯ ಸರ್ಕಾರದಿಂದ ಅಗತ್ಯ ಭೂಮಿ ಹಸ್ತಾಂತರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದ ವಿಸ್ತರಣಾ ಪ್ರಕ್ರಿಯೆ ಆರಂಭಿಸಿ ಅಭಿವೃದ್ಧಿಪಡಿಸಲಾಗುವುದರ ಜೊತೆಗೆ ನ್ಯಾರೊ ಬಾಡಿ (ಕಡಿಮೆ ಹಾಗೂ ದೂರದ ದೇಶೀಯ ಅಥವಾ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಬಳಸುವ) ವಿಮಾನಗಳಿಗೆ ಆದ್ಯತೆ ಕಲ್ಪಿಸುವಂತೆ ಯದುವೀರ್ ಅವರು ಮನವಿ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಆಯೋಜಿಸಿದ್ದ ಸಮಾಲೋಚನಾ ಸಮಿತಿ ಸಭೆಯ ನಂತರ ಕೇಂದ್ರ ಸಚಿವರು ಹೇಳಿದ್ದು, ಆದಷ್ಟು ಬೇಗ ಅದು ಕಾರ್ಯರೂಪಕ್ಕೆ ಬರುವಂತಾಗಲಿ.

– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!