ಓದುಗರ ಪತ್ರ
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜ ರಾಪು ರಾಮಮೋಹನ್ ನಾಯ್ಡು ಅವರಿಗೆ ಮನವಿ ಮಾಡಿರುವುದು ಸ್ವಾಗತಾರ್ಹ. ಹಾಗೆಯೇ ಮೈಸೂರಿಗೆ ಉತ್ತಮ ವಾಯು ಸಂಪರ್ಕ ಕಲ್ಪಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದಿರುವುದು ಖುಷಿಯ ವಿಷಯ.
ರಾಜ್ಯ ಸರ್ಕಾರದಿಂದ ಅಗತ್ಯ ಭೂಮಿ ಹಸ್ತಾಂತರವಾದ ಬಳಿಕ ಮೈಸೂರು ವಿಮಾನ ನಿಲ್ದಾಣದ ವಿಸ್ತರಣಾ ಪ್ರಕ್ರಿಯೆ ಆರಂಭಿಸಿ ಅಭಿವೃದ್ಧಿಪಡಿಸಲಾಗುವುದರ ಜೊತೆಗೆ ನ್ಯಾರೊ ಬಾಡಿ (ಕಡಿಮೆ ಹಾಗೂ ದೂರದ ದೇಶೀಯ ಅಥವಾ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಬಳಸುವ) ವಿಮಾನಗಳಿಗೆ ಆದ್ಯತೆ ಕಲ್ಪಿಸುವಂತೆ ಯದುವೀರ್ ಅವರು ಮನವಿ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಆಯೋಜಿಸಿದ್ದ ಸಮಾಲೋಚನಾ ಸಮಿತಿ ಸಭೆಯ ನಂತರ ಕೇಂದ್ರ ಸಚಿವರು ಹೇಳಿದ್ದು, ಆದಷ್ಟು ಬೇಗ ಅದು ಕಾರ್ಯರೂಪಕ್ಕೆ ಬರುವಂತಾಗಲಿ.
– ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…