Andolana originals

ಓದುಗರ ಪತ್ರ: ಇನ್ನೆಷ್ಟು ವರ್ಷ ಭಯದಲ್ಲಿ ಬದುಕಬೇಕು?

ನಂಜನಗೂಡು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಳ್ಳೂರುಹುಂಡಿಯಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ನಿತ್ಯ ಗ್ರಾಮಸ್ಥರು ಆತಂಕದಲ್ಲಿಯೇ ಜೀವನ ಸಾಗಿಸುವಂತಾಗಿದೆ.

ಗ್ರಾಮದ ರೈತರು ತಮ್ಮ ಕೃಷಿ ಚಟುವಟಿಕೆ ಗಾಗಿ ಜಮೀನುಗಳಿಗೆ ಹೋಗಲು ಸಾಧ್ಯವಾಗು ತ್ತಿಲ್ಲ. ಯಾವ ಸಮಯದಲ್ಲಾದರೂ ಕಾಡಾನೆಗಳು, ಹುಲಿಗಳು, ಕಾಡುಹಂದಿಗಳು ದಾಳಿ ನಡೆಸಬಹುದು ಎಂಬ ಆತಂಕ ಹೆಚ್ಚಾಗಿದೆ. ಪ್ರತಿನಿತ್ಯ ಇಲ್ಲಿ ಕಾಡುಪ್ರಾಣಿಗಳು ದಾಳಿ ನಡೆಸಿ ರೈತರು ಬೆಳೆದ -ಸಲನ್ನು ತುಳಿದು, ತಿಂದು ನಾಶ ಮಾಡುವ ಜತೆಗೆ ರೈತರ ಮೇಲೂ ದಾಳಿ ಮಾಡಿ ಪ್ರಾಣ ಹಾನಿ ಮಾಡಿರುವ ಉದಾಹರಣೆಗಳಿವೆ.

ಕಾಡಾನೆಗಳಂತೂ ಹಗಲು ರಾತ್ರಿ ಎನ್ನದೇ ದಾಳಿ ಮಾಡುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ರೈತರು ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟುವಂತೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೆ ಅವರು ಕಾಡಾನೆಗಳು ಬಂದಾಗ ಪಟಾಕಿ ಸಿಡಿಸಿ ಅವುಗಳನ್ನು ಹಿಮ್ಮೆಟ್ಟಿಸುತ್ತಾರೆಯೇ ವಿನಾ ಅವುಗಳು ನಾಡಿಗೆ ಬಾರದಂತೆ ತಡೆಗಟ್ಟಲು ಯಾವುದೇ ಕ್ರಮಕೈಗೊಳ್ಳುವುದಿಲ್ಲ. ಅಲ್ಲದೆ ರೈತರ ಫಸಲಿನ ನಷ್ಟಕ್ಕೆ ಸೂಕ್ತ ಪರಿಹಾರವೂ ಸಿಗುವುದಿಲ್ಲ.

ಕಾಡಿನ ಸುತ್ತ ರೈಲ್ವೆ ಕಂಬಿ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರೂ ಕಾಡಾನೆಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಕ್ಷೇತ್ರದ ಶಾಸಕರು ಹಾಗೂ ಸಂಸದರು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.

ಮಹಾಂತೇಶ್ ಬಸಪ್ಪ, ಬಳ್ಳೂರುಹುಂಡಿ, ನಂಜನಗೂಡು ತಾ

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

32 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago