ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ.
ನಮ್ಮ ಸಂವಿಧಾನವು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ ಬದುಕಲು ಅವಕಾಶ ನೀಡಿರುವ ಜತೆಗೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ದೇಶದ ಪ್ರತಿಯೊಬ್ಬರೂ ಸಂವಿಧಾನದಡಿಯಲ್ಲಿ ಜೀವಿಸುತ್ತಿದ್ದಾರೆ.
ಇಂತಹ ಸಂವಿಧಾನವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಸಾಕಷ್ಟು ದೇಶಗಳಲ್ಲಿಯೂ ನಮ್ಮ ಸಂವಿಧಾನದ ಕೆಲವೊಂದು ಅಂಶಗಳು ಪಾಲನೆಯಲ್ಲಿವೆ ಎಂಬುದು ಭಾರತೀಯರ ಹೆಮ್ಮೆ. ಹೀಗಿರುವಾಗ ಕೆಲವು ಮಠಾಧಿಪತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಅನ್ಯ ಸಮುದಾಯಗಳಿಗೆ ಮತದಾನದ ಹಕ್ಕು ನೀಡಬಾರದು ಎನ್ನುವುದು, ನಮಗೆ ಪ್ರತ್ಯೇಕ ಸಂವಿಧಾನ ಬೇಕು ಎಂದು ಬೇಡಿಕೆ ಇಡುವುದು ಎಷ್ಟು ಸರಿ? ಇಂತಹ ಹೇಳಿಕೆಗಳು ಜನಾಂಗೀಯ ದ್ವೇಷಕ್ಕೆ ಕಾರಣವಾಗಬಹುದು. ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಆದ್ದರಿಂದ ಧಾರ್ಮಿಕ ಮುಖಂಡರು ಹಾಗೂ ಸ್ವಾಮೀಜಿಗಳು ಸಂವಿಧಾನ ಹಾಗೂ ಈ ನೆಲದ ಕಾನೂನಿನ ವಿರುದ್ಧವಾಗಿ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು.
–ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್ಅನ್ನು ಮಂಡನೆ ಮಾಡಿದ್ದಾರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ…
ಬೆಂಗಳೂರು: ಎಲ್ಲಾ ಜಿಲ್ಲೆಗಳಲ್ಲೂ ಅಕ್ಕಪಡೆ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಸಿಎಂ ಸಿದ್ದರಾಮಯ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ…