Andolana originals

ಓದುಗರ ಪತ್ರ :ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆ ಸಲ್ಲದು

ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ.

ನಮ್ಮ ಸಂವಿಧಾನವು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ ಬದುಕಲು ಅವಕಾಶ ನೀಡಿರುವ ಜತೆಗೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ದೇಶದ ಪ್ರತಿಯೊಬ್ಬರೂ ಸಂವಿಧಾನದಡಿಯಲ್ಲಿ ಜೀವಿಸುತ್ತಿದ್ದಾರೆ.

ಇಂತಹ ಸಂವಿಧಾನವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಸಾಕಷ್ಟು ದೇಶಗಳಲ್ಲಿಯೂ ನಮ್ಮ ಸಂವಿಧಾನದ ಕೆಲವೊಂದು ಅಂಶಗಳು ಪಾಲನೆಯಲ್ಲಿವೆ ಎಂಬುದು ಭಾರತೀಯರ ಹೆಮ್ಮೆ. ಹೀಗಿರುವಾಗ ಕೆಲವು ಮಠಾಧಿಪತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಅನ್ಯ ಸಮುದಾಯಗಳಿಗೆ ಮತದಾನದ ಹಕ್ಕು ನೀಡಬಾರದು ಎನ್ನುವುದು, ನಮಗೆ ಪ್ರತ್ಯೇಕ ಸಂವಿಧಾನ ಬೇಕು ಎಂದು ಬೇಡಿಕೆ ಇಡುವುದು ಎಷ್ಟು ಸರಿ? ಇಂತಹ ಹೇಳಿಕೆಗಳು ಜನಾಂಗೀಯ ದ್ವೇಷಕ್ಕೆ ಕಾರಣವಾಗಬಹುದು. ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಆದ್ದರಿಂದ ಧಾರ್ಮಿಕ ಮುಖಂಡರು ಹಾಗೂ ಸ್ವಾಮೀಜಿಗಳು ಸಂವಿಧಾನ ಹಾಗೂ ಈ ನೆಲದ ಕಾನೂನಿನ ವಿರುದ್ಧವಾಗಿ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು.

ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

32 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago