ಕೆಲ ಮಠಗಳ ಸ್ವಾಮೀಜಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾದ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಗಳಿಗೆ ಗುರಿಯಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ.
ನಮ್ಮ ಸಂವಿಧಾನವು ಕೇವಲ ಒಂದು ಜಾತಿ ಅಥವಾ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ ಬದುಕಲು ಅವಕಾಶ ನೀಡಿರುವ ಜತೆಗೆ ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ದೇಶದ ಪ್ರತಿಯೊಬ್ಬರೂ ಸಂವಿಧಾನದಡಿಯಲ್ಲಿ ಜೀವಿಸುತ್ತಿದ್ದಾರೆ.
ಇಂತಹ ಸಂವಿಧಾನವನ್ನು ವಿಶ್ವವೇ ಒಪ್ಪಿಕೊಂಡಿದ್ದು, ಸಾಕಷ್ಟು ದೇಶಗಳಲ್ಲಿಯೂ ನಮ್ಮ ಸಂವಿಧಾನದ ಕೆಲವೊಂದು ಅಂಶಗಳು ಪಾಲನೆಯಲ್ಲಿವೆ ಎಂಬುದು ಭಾರತೀಯರ ಹೆಮ್ಮೆ. ಹೀಗಿರುವಾಗ ಕೆಲವು ಮಠಾಧಿಪತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಅನ್ಯ ಸಮುದಾಯಗಳಿಗೆ ಮತದಾನದ ಹಕ್ಕು ನೀಡಬಾರದು ಎನ್ನುವುದು, ನಮಗೆ ಪ್ರತ್ಯೇಕ ಸಂವಿಧಾನ ಬೇಕು ಎಂದು ಬೇಡಿಕೆ ಇಡುವುದು ಎಷ್ಟು ಸರಿ? ಇಂತಹ ಹೇಳಿಕೆಗಳು ಜನಾಂಗೀಯ ದ್ವೇಷಕ್ಕೆ ಕಾರಣವಾಗಬಹುದು. ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಆದ್ದರಿಂದ ಧಾರ್ಮಿಕ ಮುಖಂಡರು ಹಾಗೂ ಸ್ವಾಮೀಜಿಗಳು ಸಂವಿಧಾನ ಹಾಗೂ ಈ ನೆಲದ ಕಾನೂನಿನ ವಿರುದ್ಧವಾಗಿ ಹೇಳಿಕೆಗಳನ್ನು ನೀಡುವುದನ್ನು ಬಿಡಬೇಕು.
–ಎಂ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…