ಓದುಗರ ಪತ್ರ
ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು ಸುಧಾರಿಸಲು ಅಲ್ಲಿನ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ನಮ್ಮ ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಬೇಕು.
ಕನ್ನಡ ಭಾಷೆಯ ಅಭಿವೃದ್ಧಿಯಲ್ಲಿ ಕನ್ನಡ ದಿನಪತ್ರಿಕೆಗಳ ಪಾತ್ರ ಬಹುಮುಖ್ಯವಾಗಿದೆ. ಕನ್ನಡ ಶಬ್ದಗಳನ್ನು ಪ್ರತಿನಿತ್ಯ ಬಳಸುವುದರಿಂದ ಕನ್ನಡ ಶಬ್ದ ಭಂಡಾರವು ಮಕ್ಕಳಲ್ಲಿ ಹೆಚ್ಚಾಗುತ್ತಿದೆ. ಭಾಷಾ ಕೌಶಲ ಸುಧಾರಣೆ, ಹೊಸ ಪದಗಳು, ವಾಕ್ಯ ರಚನೆ, ಬರವಣಿಗೆ ಶೈಲಿ, ಭಾಷಾ ನೈಪುಣ್ಯತೆಯನ್ನು ಮಕ್ಕಳು ರೂಢಿಸಿಕೊಳ್ಳುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಕನ್ನಡ ಪತ್ರಿಕೆಗಳನ್ನು ಓದಿಸುವುದು ಕಡ್ಡಾಯವಾದರೆ ಗ್ರಾಮೀಣ ಮಕ್ಕಳಿಗೂ ಜಾಗತಿಕ ಜ್ಞಾನ, ಹಳ್ಳಿಯ ಮಕ್ಕಳಿಗೆ ದೇಶ-ವಿದೇಶಗಳು ವಿದ್ಯಮಾನಗಳು ಸುಲಭವಾಗಿ ತಲುಪುತ್ತವೆ. ಪತ್ರಿಕೆಗಳಲ್ಲಿ ಬರುವ ಪದಬಂಧಗಳನ್ನು ಬಿಡಿಸಲು ಮಕ್ಕಳನ್ನು ಪ್ರೋತ್ಸಾಹಿಸುವುದರಿಂದ, ಅವರಲ್ಲಿ ಆಲೋಚನಾ ಸಾಮರ್ಥ್ಯ ಹೆಚ್ಚುತ್ತದೆ.
ಶಾಲಾ ಸಮಯದಲ್ಲಿ ದಿನನಿತ್ಯ ೧೦-೧೫ ನಿಮಿಷ ಮೀಸಲಿಟ್ಟು, ಪತ್ರಿಕೆ ಓದುವುದು, ಕಠಿಣ ಪದಗಳ ಅರ್ಥ ತಿಳಿಯುವುದು, ಭಿತ್ತಿಪತ್ರಿಕೆಗಳ ಮೂಲಕ ವಿಶ್ಲೇಷಣೆ ಮಾಡುವುದು, ಮತ್ತು ಮಕ್ಕಳ ವಿಭಾಗದ ಬರಹಗಳಿಗೆ ಪ್ರೋತ್ಸಾಹಿಸುವುದು ಉತ್ತಮ. ಇದು ವಿದ್ಯಾರ್ಥಿಗಳನ್ನು ಜಾಗೃತ ನಾಗರಿಕರನ್ನಾಗಿ ರೂಪಿಸಲು ಸಹಕಾರಿಯಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…