ಓದುಗರ ಪತ್ರ
ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ ನಾಲ್ಕು ಚಕ್ರ ವಾಹನಗಳಿಗೆ ನೂರು ರೂ. ಪಾರ್ಕಿಂಗ್ ಶುಲ್ಕ ಇದ್ದಿದ್ದನ್ನು ೨೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಅಷ್ಟೇ ಅಲ್ಲದೇ ಟೋಲ್ನಲ್ಲಿ ೧೦೦ ರೂ. ಶುಲ್ಕವನ್ನು ಪಡೆಯಲಾಗುತ್ತಿದೆ. ೫೦ ರೂ. ಇದ್ದ ಪ್ರವೇಶದರವನ್ನು ೧೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಕೆಆರ್ಎಸ್ ಸದ್ಯ ದೀಪಗಳ ಅಲಂಕಾರವಿಲ್ಲದೆ ಕಳೆಗುಂದಿದ್ದು, ಇಲ್ಲಿಗೆ ಬರುವ ಪ್ರವಾಸಿಗರು ದುಬಾರಿ ಹಣ ತೆತ್ತು ಬೇಸರದಿಂದ ವಾಪಸಾಗುತ್ತಿದ್ದಾರೆ.
ಸಂಬಂಧಪಟ್ಟವರು ಈಗಲಾದರೂ ಪ್ರವೇಶದರ ಹಾಗೂ ವಾಹನ ಪಾರ್ಕಿಂಗ್ ಶುಲ್ಕವನ್ನು ಕೂಡಲೇ ಕಡಿಮೆ ಮಾಡುವುದರೊಂದಿಗೆ ಕೆಆರ್ ಎಸ್ನಲ್ಲಿ ಈ ಮೊದಲಿನಂತೆಯೇ ವಿದ್ಯುತ್ ದೀಪಾಲಂಕಾರ, ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…