Andolana originals

ಓದುಗರ ಪತ್ರ: ಕೆಆರ್‌ಎಸ್ ಪ್ರವೇಶ ದರ ಇಳಿಸಿ

ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್‌ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ ನಾಲ್ಕು ಚಕ್ರ ವಾಹನಗಳಿಗೆ ನೂರು ರೂ. ಪಾರ್ಕಿಂಗ್ ಶುಲ್ಕ ಇದ್ದಿದ್ದನ್ನು ೨೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಅಷ್ಟೇ ಅಲ್ಲದೇ ಟೋಲ್‌ನಲ್ಲಿ ೧೦೦ ರೂ. ಶುಲ್ಕವನ್ನು ಪಡೆಯಲಾಗುತ್ತಿದೆ. ೫೦ ರೂ. ಇದ್ದ ಪ್ರವೇಶದರವನ್ನು ೧೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಕೆಆರ್‌ಎಸ್ ಸದ್ಯ ದೀಪಗಳ ಅಲಂಕಾರವಿಲ್ಲದೆ ಕಳೆಗುಂದಿದ್ದು, ಇಲ್ಲಿಗೆ ಬರುವ ಪ್ರವಾಸಿಗರು ದುಬಾರಿ ಹಣ ತೆತ್ತು ಬೇಸರದಿಂದ ವಾಪಸಾಗುತ್ತಿದ್ದಾರೆ.

ಸಂಬಂಧಪಟ್ಟವರು ಈಗಲಾದರೂ ಪ್ರವೇಶದರ ಹಾಗೂ ವಾಹನ ಪಾರ್ಕಿಂಗ್ ಶುಲ್ಕವನ್ನು ಕೂಡಲೇ ಕಡಿಮೆ ಮಾಡುವುದರೊಂದಿಗೆ ಕೆಆರ್ ಎಸ್‌ನಲ್ಲಿ ಈ ಮೊದಲಿನಂತೆಯೇ ವಿದ್ಯುತ್ ದೀಪಾಲಂಕಾರ, ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

14 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

18 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

21 hours ago