ಓದುಗರ ಪತ್ರ
ಮಂಡ್ಯ ಜಿಲ್ಲೆಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟೆಯನ್ನು ವೀಕ್ಷಿಸಲು ದೇಶದ ವಿವಿಧೆಡೆಗಳಿಂದ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ ರಾಜ್ಯ ಸರ್ಕಾರ ಇತ್ತೀಚೆಗೆ ಕೆಆರ್ಎಸ್ ಪ್ರವೇಶ ದರವನ್ನು ಹೆಚ್ಚಳ ಮಾಡಿರುವುದು ಪ್ರವಾಸಿಗರಿಗೆ ಬರೆ ಎಳೆದಂತಾಗಿದೆ. ಈ ಹಿಂದೆ ನಾಲ್ಕು ಚಕ್ರ ವಾಹನಗಳಿಗೆ ನೂರು ರೂ. ಪಾರ್ಕಿಂಗ್ ಶುಲ್ಕ ಇದ್ದಿದ್ದನ್ನು ೨೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಅಷ್ಟೇ ಅಲ್ಲದೇ ಟೋಲ್ನಲ್ಲಿ ೧೦೦ ರೂ. ಶುಲ್ಕವನ್ನು ಪಡೆಯಲಾಗುತ್ತಿದೆ. ೫೦ ರೂ. ಇದ್ದ ಪ್ರವೇಶದರವನ್ನು ೧೦೦ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಕೆಆರ್ಎಸ್ ಸದ್ಯ ದೀಪಗಳ ಅಲಂಕಾರವಿಲ್ಲದೆ ಕಳೆಗುಂದಿದ್ದು, ಇಲ್ಲಿಗೆ ಬರುವ ಪ್ರವಾಸಿಗರು ದುಬಾರಿ ಹಣ ತೆತ್ತು ಬೇಸರದಿಂದ ವಾಪಸಾಗುತ್ತಿದ್ದಾರೆ.
ಸಂಬಂಧಪಟ್ಟವರು ಈಗಲಾದರೂ ಪ್ರವೇಶದರ ಹಾಗೂ ವಾಹನ ಪಾರ್ಕಿಂಗ್ ಶುಲ್ಕವನ್ನು ಕೂಡಲೇ ಕಡಿಮೆ ಮಾಡುವುದರೊಂದಿಗೆ ಕೆಆರ್ ಎಸ್ನಲ್ಲಿ ಈ ಮೊದಲಿನಂತೆಯೇ ವಿದ್ಯುತ್ ದೀಪಾಲಂಕಾರ, ಮೊದಲಾದ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ಸಿದ್ದಲಿಂಗೆಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…