ಓದುಗರ ಪತ್ರ
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದರಿಂದಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಎನ್ಜಿ, ಆಟೋ ಎಲ್ಪಿಜಿ ಗ್ಯಾಸ್ ದರಗಳನ್ನು ಮೂರು ಬಾರಿ ಏರಿಕೆ ಮಾಡಿದೆ.
ಪೆಟ್ರೋಲ್ ಮೇಲೆ ರಾಜ್ಯದಲ್ಲಿ ೨೯.೮೪ ರೂ. ಡೀಸೆಲ್ ಮೇಲೆ ೨೧.೧೭ ರೂ. ಗೃಹ ಬಳಕೆ ಅಡುಗೆ ಅನಿಲದ ಮೇಲೆ ಪ್ರತಿ ಸಿಲಿಂಡರ್ಗೆ ೪೩.೩೬ ರೂ. ಜಿಎಸ್ಟಿ ವಿಧಿಸುತ್ತಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ತೆರಿಗೆಯೂ ಸೇರಿರುವುದರಿಂದ ಪೆಟ್ರೋಲ್ ಬೆಲೆ ಲೀಟರ್ಗೆ ೧೧೧ರೂ., ಡೀಸೆಲ್ ೧೦೦ ರೂ. ಗಳಾಗಿದೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ ೯೫೦ ರೂ. ಆಗಿದ್ದು, ಸರಕು ಸಾಗಣೆ ದರ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ.
ಇಂಧನ ಬೆಲೆ ಏರಿಕೆಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಆರೋಪ ಹಾಗೂ ಪ್ರತ್ಯಾರೋಪ ಮಾಡುತ್ತಿವೆಯೇ ಹೊರತು ಇಂಧನದ ಮೇಲಿನ ತೆರಿಯನ್ನು ಕಡಿತಗೊಳಿಸುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿತ ಮಾಡಿ ಪ್ರಜೆಗಳ ಹಿತ ಕಾಪಾಡುವುದು ಅಗತ್ಯ.
– ಗುರು, ಕಾರ್ಯ, ನಂಜನಗೂಡು ತಾ.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…