ಓದುಗರ ಪತ್ರ
ಅಮೆರಿಕ -ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಽಯನ್ನು ಮುಚ್ಚಿದ್ದರಿಂದಾಗಿ ಕಚ್ಚಾತೈಲದ ಆಮದು ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದರಿಂದಾಗಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಎನ್ಜಿ, ಆಟೋ ಎಲ್ಪಿಜಿ ಗ್ಯಾಸ್ ದರಗಳನ್ನು ಮೂರು ಬಾರಿ ಏರಿಕೆ ಮಾಡಿದೆ.
ಪೆಟ್ರೋಲ್ ಮೇಲೆ ರಾಜ್ಯದಲ್ಲಿ ೨೯.೮೪ ರೂ. ಡೀಸೆಲ್ ಮೇಲೆ ೨೧.೧೭ ರೂ. ಗೃಹ ಬಳಕೆ ಅಡುಗೆ ಅನಿಲದ ಮೇಲೆ ಪ್ರತಿ ಸಿಲಿಂಡರ್ಗೆ ೪೩.೩೬ ರೂ. ಜಿಎಸ್ಟಿ ವಿಧಿಸುತ್ತಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ತೆರಿಗೆಯೂ ಸೇರಿರುವುದರಿಂದ ಪೆಟ್ರೋಲ್ ಬೆಲೆ ಲೀಟರ್ಗೆ ೧೧೧ರೂ., ಡೀಸೆಲ್ ೧೦೦ ರೂ. ಗಳಾಗಿದೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ ೯೫೦ ರೂ. ಆಗಿದ್ದು, ಸರಕು ಸಾಗಣೆ ದರ ಹೆಚ್ಚಾಗಿರುವುದರಿಂದ ಬಡ ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದೇ ದುಸ್ತರವಾಗಿದೆ.
ಇಂಧನ ಬೆಲೆ ಏರಿಕೆಯ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ಆರೋಪ ಹಾಗೂ ಪ್ರತ್ಯಾರೋಪ ಮಾಡುತ್ತಿವೆಯೇ ಹೊರತು ಇಂಧನದ ಮೇಲಿನ ತೆರಿಯನ್ನು ಕಡಿತಗೊಳಿಸುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ತೆರಿಗೆಯನ್ನು ಕಡಿತ ಮಾಡಿ ಪ್ರಜೆಗಳ ಹಿತ ಕಾಪಾಡುವುದು ಅಗತ್ಯ.
– ಗುರು, ಕಾರ್ಯ, ನಂಜನಗೂಡು ತಾ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…