Andolana originals

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ ಪುಸ್ತಕಗಳು ಮತ್ತು ನೋಟ್ ಪುಸ್ತಕಗಳಷ್ಟೇ ಅಲ್ಲದೆ ಊಟದ ಬಾಕ್ಸ್, ನೀರಿನ ಬಾಟಲಿಯನ್ನೂ ತೆಗೆದುಕೊಂಡು ಹೋಗಬೇಕಿದೆ. ಇದು ಶಾಲಾಮಕ್ಕಳಿಗೆ ಅನಿವಾರ್ಯವೆನಿಸಿದೆ.ಎಳೆಯ ಮಕ್ಕಳ ಬೆನ್ನುಗಳಿಗೆ ಭಾರ ಕಡಿಮೆ ಮಾಡುವುದು ಇಂದಿನ ಅಗತ್ಯವೂ ಆಗಿದೆ.ಈ ವಿಷಯವಾಗಿ ಶಿಕ್ಷಣ ಆಸಕ್ತರು ಚಿಂತನೆ ನಡೆಸಬೇಕಿದೆ. ಪಠ್ಯ ಪುಸ್ತಕಗಳನ್ನು ಎರಡು ಪ್ರತ್ಯೇಕ ಭಾಗಗಳಾಗಿ ವಿಂಗಡಿಸಿ ಎರಡು ಬೇರೆ ಬೇರೆ ಪುಸ್ತಕಗಳನ್ನು ಮುದ್ರಿಸಿ ಪ್ರಕಟಿಸುವುದು. ಉದಾಹರಣೆಗೆ, ಒಂದು ವಿಷಯದ ಪುಸ್ತಕದಲ್ಲಿ ೨೦ ಅಧ್ಯಾಯಗಳು ಇದ್ದರೆ, ಮೊದಲ ೧೦ ಅಧ್ಯಾಯ ಒಳಗೊಂಡ ಪುಸ್ತಕ ಭಾಗ ೧, ಉಳಿದ ೧೦ ಅಧ್ಯಾಯಗಳ ಪುಸ್ತಕ ಭಾಗ..೨ ಎಂದು ಎರಡು ಪುಸ್ತಕಗಳನ್ನು ಮುದ್ರಿಸುವುದು. ಮೊದಲ ಭಾಗದ ಪಠ್ಯ ಕ್ರಮ ಮುಗಿಯುವವರೆಗೆ ಮಕ್ಕಳು ಭಾಗ..೧ ಪುಸ್ತಕಗಳನ್ನು ಮಾತ್ರ ಕೊಂಡೊಯ್ಯುವುದು. ಅದಾದ ಬಳಿಕ ಭಾಗ..೨ ಪುಸ್ತಕಗಳನ್ನು ಕೊಂಡೊಯ್ಯಬಹುದು. ಇದನ್ನು ಅನುಸರಿಸಿದರೆ ಶಾಲಾ ಮಕ್ಕಳ ಬ್ಯಾಗ್ ಗಳ ಭಾರವನ್ನು ಅರ್ಧದಷ್ಟು ಕಡಿಮೆ ಮಾಡಲು ಸಾಧ್ಯ. ಪುಸ್ತಕ ಎರಡು ಭಾಗ ಮುದ್ರಿಸಲು ಸ್ವಲ್ಪ ಹೆಚ್ಚು ಖರ್ಚು ತಗಲಿದರೂ, ಮಕ್ಕಳಿಗೆ ಇದರಿಂದ ಹೊರೆ ಕಡಿಮೆ ಆಗುವುದರಿಂದ ಆಗುವ ಲಾಭಕ್ಕೆ ಹೋಲಿಸಿದರೆ ಆ ಖರ್ಚು ನಗಣ್ಯ. ಈ ಸಲಹೆಯನ್ನು ಶಿಕ್ಷಣ ಇಲಾಖೆಯವರು ಪರಿಶೀಲಿಸಬೇಕಿದೆ.

– -ಲಕ್ಷ್ಮಣ್ ಗೊರ್ಲಕಟ್ಟೆ ,ಬೋಗಾದಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

59 mins ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

1 hour ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

1 hour ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

1 hour ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

1 hour ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

1 hour ago