ಓದುಗರ ಪತ್ರ
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ ತೂಕದ ಶೇ.೧೦ ಮೀರಬಾರದು ಎನ್ನುವ ನಿಯಮ ಕಾಗದದ ಮೇಲೆಯೇ ಉಳಿದಿದೆ.
ಅಂಕಿಅಂಶಗಳ ಪ್ರಕಾರ ಸುಮಾರು ಶೇ. ೪೫-೫೦ ಶಾಲಾ ಮಕ್ಕಳು ಬೆನ್ನು ಮತ್ತು ಕುತ್ತಿಗೆ ನೋವಿನಿಂದ ಬಳಲುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅತಿಯಾದ ಬ್ಯಾಗ್ ತೂಕ. ಆದರೂ ಶಿಕ್ಷಣ ಇಲಾಖೆ ಈ ವಿಷಯದಲ್ಲಿ ಗಂಭೀರ ಕ್ರಮ ಕೈಗೊಳ್ಳದೇ ಮೌನವಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಪೋಷಕರು ಪ್ರಶ್ನಿಸುತ್ತಿದ್ದರೂ, ಶಾಲೆಗಳ ಮೇಲೆ ನಿಯಮಿತ ಪರಿಶೀಲನೆ ಮತ್ತು ದಂಡ ಕ್ರಮಗಳಿಲ್ಲ. ತರಗತಿ ಮಟ್ಟದಲ್ಲಿ ಬ್ಯಾಗ್ ತೂಕ ಪರಿಶೀಲನೆ, ಹಗುರವಾದ ಪುಸ್ತಕಗಳು ಮತ್ತು ಡಿಜಿಟಲ್ ನೋಟ್ಸ್ ಬಳಸಬಹುದಾಗಿದೆ.
ಮಗುವಿನ ಬೆನ್ನೆಲುಬು ಸುರಕ್ಷಿತವಾದರೆ ಮಾತ್ರ ಭವಿಷ್ಯ ಸುರಕ್ಷಿತ. ಶಿಕ್ಷಣ ಇಲಾಖೆ ತಕ್ಷಣ ಜವಾಬ್ದಾರಿ ವಹಿಸಬೇಕು. ಇದಲ್ಲದೆ, ವೈದ್ಯಕೀಯ ವರದಿಗಳಂತೆ ಪ್ರತಿ ೫ ಮಕ್ಕಳಲ್ಲಿ ೨ ಮಕ್ಕಳು ಶಾಲಾ ವಯಸ್ಸಿನಲ್ಲೇ ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದು ಶಿಕ್ಷಣದ ಒತ್ತಡ ಮಕ್ಕಳ ದೇಹದ ಮೇಲೆ ಎಷ್ಟು ಪರಿಣಾಮ ಬೀರುತ್ತಿದೆ ಎಂಬುದನ್ನು ತೋರಿಸುತ್ತದೆ. ಶಿಕ್ಷಣವು ಜ್ಞಾನ ಮಾತ್ರವಲ್ಲ, ಆರೋಗ್ಯವನ್ನೂ ರಕ್ಷಿಸಬೇಕು.
-ಡಾ. ಎಚ್.ಕೆ.ವಿಜಯಕುಮಾರ್, ಬೆಂಗಳೂರು
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…