ಕಳೆದ ಒಂದು ವರ್ಷದಿಂದಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ವಿಮೆ ಮತ್ತು ಜೀವ ವಿಮೆಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆಯೇ ವಿನಾ ಈವರೆಗೂ ಕಡಿಮೆ ಮಾಡಿಲ್ಲ.
2024ರ ಡಿಸೆಂಬರ್ನಲ್ಲಿ ನಿರ್ಮಲಾ ಸೀತಾರಾಮನ್ರವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ಟಿ ಆಡಳಿತ ಮಂಡಳಿ ಸಭೆಯಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಆರೋಗ್ಯ ವಿಮೆ ಮತ್ತು ಜೀವ ವಿಮೆ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ವಿಮೆಗಳ ಮೇಲಿನ ಜಿಎಸ್ಟಿ ಕಡಿಮೆ ಮಾಡುವ ಸಲುವಾಗಿ ನೇಮಕ ಮಾಡಿದ್ದ ಸಮಿತಿಯೂ ಇವುಗಳ ಮೇಲಿನ ಶೇ. 18ರಷ್ಟು ಜಿಎಸ್ಟಿಯನ್ನು ಕಡಿತಗೊಳಿಸುವಂತೆ ಶಿಫಾರಸು ಮಾಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಮುಂದೂಡಿರುವುದು ಸರಿಯಲ್ಲ.
ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಸಚಿವರು, ಈ ಎರಡೂ ವಿಮೆಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಅಽಕ ಜಿಎಸ್ಟಿಯಿಂದಾಗಿ ಮಧ್ಯಮ ವರ್ಗದ ಜನರು ಆರೋಗ್ಯ ವಿಮೆಗಳಿಂದ ದೂರು ಉಳಿಯುವಂತಾಗಿದೆ. ಆದ್ದರಿಂದ ವಿತ್ತ ಸಚಿವರು ಈ ಬಾರಿ ಯಾದರೂ ಜಿಎಸ್ಟಿ ಮಂಡಳಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು…
ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…
ಮುಂಬೈ : ಬಾಲಿವುಡ್, ಟಾಲಿವುಡ್, ಸ್ಯಾಂಡಲ್ವುಡ್ ಸೇರಿದಂತೆ ಎಲ್ಲಾ ವುಡ್ಗಳಲ್ಲಿಯೂ ಧುರಂಧರ್ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…
ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…
ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…
ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…