ಕಳೆದ ಒಂದು ವರ್ಷದಿಂದಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರೋಗ್ಯ ವಿಮೆ ಮತ್ತು ಜೀವ ವಿಮೆಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಾಗಿ ಹೇಳುತ್ತಿದ್ದಾರೆಯೇ ವಿನಾ ಈವರೆಗೂ ಕಡಿಮೆ ಮಾಡಿಲ್ಲ.
2024ರ ಡಿಸೆಂಬರ್ನಲ್ಲಿ ನಿರ್ಮಲಾ ಸೀತಾರಾಮನ್ರವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ಟಿ ಆಡಳಿತ ಮಂಡಳಿ ಸಭೆಯಲ್ಲಿ ಮುಂದಿನ ಹಣಕಾಸು ವರ್ಷದಲ್ಲಿ ಆರೋಗ್ಯ ವಿಮೆ ಮತ್ತು ಜೀವ ವಿಮೆ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದರು. ವಿಮೆಗಳ ಮೇಲಿನ ಜಿಎಸ್ಟಿ ಕಡಿಮೆ ಮಾಡುವ ಸಲುವಾಗಿ ನೇಮಕ ಮಾಡಿದ್ದ ಸಮಿತಿಯೂ ಇವುಗಳ ಮೇಲಿನ ಶೇ. 18ರಷ್ಟು ಜಿಎಸ್ಟಿಯನ್ನು ಕಡಿತಗೊಳಿಸುವಂತೆ ಶಿಫಾರಸು ಮಾಡಿದ್ದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ ಮುಂದೂಡಿರುವುದು ಸರಿಯಲ್ಲ.
ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ಸಚಿವರು, ಈ ಎರಡೂ ವಿಮೆಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡುವಂತೆ ಸೂಚಿಸುತ್ತಿದ್ದಾರೆ. ಅಲ್ಲದೆ ಅಽಕ ಜಿಎಸ್ಟಿಯಿಂದಾಗಿ ಮಧ್ಯಮ ವರ್ಗದ ಜನರು ಆರೋಗ್ಯ ವಿಮೆಗಳಿಂದ ದೂರು ಉಳಿಯುವಂತಾಗಿದೆ. ಆದ್ದರಿಂದ ವಿತ್ತ ಸಚಿವರು ಈ ಬಾರಿ ಯಾದರೂ ಜಿಎಸ್ಟಿ ಮಂಡಳಿಯೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…