ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ ನೀಡದೆ ಮಧ್ಯಾಹ್ನ ೧೨ ಗಂಟೆಗೇ ಅರಮನೆ ಪ್ರವೇಶಿಸುವ ಎಲ್ಲ ಗೇಟ್ಗಳನ್ನು ಬಂದ್ ಮಾಡಿದ್ದರು. ದೊಡ್ಡಗಡಿಯಾರ, ಕೆ.ಆರ್. ವೃತ್ತ ಸೇರಿದಂತೆ ಇತರ ಸ್ಥಳಗಳಲ್ಲಿ ರಸ್ತೆಯ ಬದಿಯಲ್ಲಿ ನಿಂತು ಜಂಬೂ ಸವಾರಿ ನೋಡಿ ಎಂದು ಪುಕ್ಕಟೆ ಸಲಹೆಯನ್ನು ಬೇರೆ ನೀಡುತ್ತಿದ್ದರು. ಇದು ನ್ಯಾಯವೇ? ಮಾಧ್ಯಮಗಳ ಮುಂದೆ ಪೊಲೀಸ್ ಆಯುಕ್ತರು ದಸರಾ ವೀಕ್ಷಣೆಗೆ ಬರುವವರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಇವರ ಮಾತನ್ನು ನಂಬಿ ಪಾಸ್ ಪಡೆದ ಅನೇಕ ಮಂದಿಗೆ ಪ್ರವೇಶ ನಿರಾಕರಿಸಿದ್ದು ಖಂಡನೀಯ. ಬಹುತೇಕ ಜನರು ನಿರಾಸೆಯೊಂದಿಗೆ ದಸರಾ ನೋಡಲು ಹರಸಾಹಸಪಟ್ಟರೆ, ಮತ್ತೆ ಕೆಲವರು ಜಂಬೂ ಸವಾರಿ ಮೆರವಣಿಗೆಯನ್ನೇ ನೋಡದೆ ಮನೆಯತ್ತ ಹೊರಟರು. ದಸರಾ ಅಚ್ಚುಕಟ್ಟಾಗಿ ನಡೆಯಲು ಕರ್ತವ್ಯ ನಿರ್ವಹಿಸಿದ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರು ಗೋಲ್ಡ್ ಪಾಸ್ ಪಡೆದು ದಸರಾ ವೀಕ್ಷಣೆ ಮಾಡಲು ಅವಕಾಶ ಸಿಗದಿರುವವರನ್ನು ಗುರುತಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದೊಡನೆ ಚರ್ಚಿಸಿ ಹಣ ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು.
– ನಾಗೇಶ್ ,ಮಾನಸಗಂಗೋತ್ರಿ, ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…