ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ ನೀಡದೆ ಮಧ್ಯಾಹ್ನ ೧೨ ಗಂಟೆಗೇ ಅರಮನೆ ಪ್ರವೇಶಿಸುವ ಎಲ್ಲ ಗೇಟ್ಗಳನ್ನು ಬಂದ್ ಮಾಡಿದ್ದರು. ದೊಡ್ಡಗಡಿಯಾರ, ಕೆ.ಆರ್. ವೃತ್ತ ಸೇರಿದಂತೆ ಇತರ ಸ್ಥಳಗಳಲ್ಲಿ ರಸ್ತೆಯ ಬದಿಯಲ್ಲಿ ನಿಂತು ಜಂಬೂ ಸವಾರಿ ನೋಡಿ ಎಂದು ಪುಕ್ಕಟೆ ಸಲಹೆಯನ್ನು ಬೇರೆ ನೀಡುತ್ತಿದ್ದರು. ಇದು ನ್ಯಾಯವೇ? ಮಾಧ್ಯಮಗಳ ಮುಂದೆ ಪೊಲೀಸ್ ಆಯುಕ್ತರು ದಸರಾ ವೀಕ್ಷಣೆಗೆ ಬರುವವರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಇವರ ಮಾತನ್ನು ನಂಬಿ ಪಾಸ್ ಪಡೆದ ಅನೇಕ ಮಂದಿಗೆ ಪ್ರವೇಶ ನಿರಾಕರಿಸಿದ್ದು ಖಂಡನೀಯ. ಬಹುತೇಕ ಜನರು ನಿರಾಸೆಯೊಂದಿಗೆ ದಸರಾ ನೋಡಲು ಹರಸಾಹಸಪಟ್ಟರೆ, ಮತ್ತೆ ಕೆಲವರು ಜಂಬೂ ಸವಾರಿ ಮೆರವಣಿಗೆಯನ್ನೇ ನೋಡದೆ ಮನೆಯತ್ತ ಹೊರಟರು. ದಸರಾ ಅಚ್ಚುಕಟ್ಟಾಗಿ ನಡೆಯಲು ಕರ್ತವ್ಯ ನಿರ್ವಹಿಸಿದ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರು ಗೋಲ್ಡ್ ಪಾಸ್ ಪಡೆದು ದಸರಾ ವೀಕ್ಷಣೆ ಮಾಡಲು ಅವಕಾಶ ಸಿಗದಿರುವವರನ್ನು ಗುರುತಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದೊಡನೆ ಚರ್ಚಿಸಿ ಹಣ ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು.
– ನಾಗೇಶ್ ,ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…