ಓದುಗರ ಪತ್ರ
೨೦೨೫ರ ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ದಸರಾ ಸಮಿತಿ ಪರಿಚಯಿಸಿದ್ದ ಗೋಲ್ಡ್ ಪಾಸ್ ಅನ್ನು ೬,೫೦೦ರೂ. ಕೊಟ್ಟು ಖರೀದಿಸಿದ ಹಲವು ಮಂದಿಗೆ ತೀರ ನಿರಾಸೆ ಉಂಟಾಗಿದೆ. ಹಣ ತೆತ್ತು ಗೋಲ್ಡ್ ಪಾಸ್ ಖರೀದಿಸಿದವರಿಗೆ ನಿಗದಿಪಡಿಸಿದ ಸ್ಥಳದಲ್ಲಿ ಜಂಬೂಸವಾರಿ ವೀಕ್ಷಿಸಲು ಪೊಲೀಸರು ಅನುಮತಿ ನೀಡದೆ ಮಧ್ಯಾಹ್ನ ೧೨ ಗಂಟೆಗೇ ಅರಮನೆ ಪ್ರವೇಶಿಸುವ ಎಲ್ಲ ಗೇಟ್ಗಳನ್ನು ಬಂದ್ ಮಾಡಿದ್ದರು. ದೊಡ್ಡಗಡಿಯಾರ, ಕೆ.ಆರ್. ವೃತ್ತ ಸೇರಿದಂತೆ ಇತರ ಸ್ಥಳಗಳಲ್ಲಿ ರಸ್ತೆಯ ಬದಿಯಲ್ಲಿ ನಿಂತು ಜಂಬೂ ಸವಾರಿ ನೋಡಿ ಎಂದು ಪುಕ್ಕಟೆ ಸಲಹೆಯನ್ನು ಬೇರೆ ನೀಡುತ್ತಿದ್ದರು. ಇದು ನ್ಯಾಯವೇ? ಮಾಧ್ಯಮಗಳ ಮುಂದೆ ಪೊಲೀಸ್ ಆಯುಕ್ತರು ದಸರಾ ವೀಕ್ಷಣೆಗೆ ಬರುವವರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದರು. ಇವರ ಮಾತನ್ನು ನಂಬಿ ಪಾಸ್ ಪಡೆದ ಅನೇಕ ಮಂದಿಗೆ ಪ್ರವೇಶ ನಿರಾಕರಿಸಿದ್ದು ಖಂಡನೀಯ. ಬಹುತೇಕ ಜನರು ನಿರಾಸೆಯೊಂದಿಗೆ ದಸರಾ ನೋಡಲು ಹರಸಾಹಸಪಟ್ಟರೆ, ಮತ್ತೆ ಕೆಲವರು ಜಂಬೂ ಸವಾರಿ ಮೆರವಣಿಗೆಯನ್ನೇ ನೋಡದೆ ಮನೆಯತ್ತ ಹೊರಟರು. ದಸರಾ ಅಚ್ಚುಕಟ್ಟಾಗಿ ನಡೆಯಲು ಕರ್ತವ್ಯ ನಿರ್ವಹಿಸಿದ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರು ಗೋಲ್ಡ್ ಪಾಸ್ ಪಡೆದು ದಸರಾ ವೀಕ್ಷಣೆ ಮಾಡಲು ಅವಕಾಶ ಸಿಗದಿರುವವರನ್ನು ಗುರುತಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದೊಡನೆ ಚರ್ಚಿಸಿ ಹಣ ಹಿಂದಿರುಗಿಸಲು ಕ್ರಮ ಕೈಗೊಳ್ಳಬೇಕು.
– ನಾಗೇಶ್ ,ಮಾನಸಗಂಗೋತ್ರಿ, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…