Mysore
30
broken clouds

Social Media

ಶನಿವಾರ, 25 ಜುಲೈ 2026
Light
Dark

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಓದುಗರ ಪತ್ರ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

ಬಸ್‌ನಿಂದ ಪ್ರಯಾಣಿಕರು ಇಳಿದು ಹೊರ ಬರುತ್ತಿದ್ದಂತೆ ಆಟೋ ಚಾಲಕರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಊರಿಗೆ ಹೊಸಬರು ಎಂದು ತಿಳಿದರಂತೂ ಕನಿಷ್ಠ ದೂರಕ್ಕೂ ದುಬಾರಿ ಹಣ ವಸೂಲಿ ಮಾಡುತ್ತಾರೆ. ಸಂಚಾರ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದ ಬಳಿ ಅಡ್ಡಾದಿಡ್ಡಿಯಾಗಿ ಆಟೋ ನಿಲ್ಲಿಸುವ ಹಾಗೂ ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡುವ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಅಗತ್ಯ.

-ಎಚ್.ಆರ್.ಉದಯ ಕುಮಾರ್, ಪ್ರಥಮ ಎಂ.ಎ.ಪತ್ರಿಕೋದ್ಯಮ, ಮೈಸೂರು ವಿವಿ

Tags:
error: Content is protected !!