ಓದುಗರ ಪತ್ರ
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.
-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…
ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು…