ಓದುಗರ ಪತ್ರ
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.
-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…