ಓದುಗರ ಪತ್ರ
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.
-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…
ಮಹದೇವ ಶಂಕನಪುರ ಎಚ್.ಎಸ್.ಶಿವಪ್ರಕಾಶ್ ಅವರ ನಾಟಕ ‘ಮಾದಾರಿ ಮಾದಯ್ಯ’ ಕಳೆದ ೩೫ ವರ್ಷಗಳಿಂದಲೂ ಕನ್ನಡ ನೆಲದಲ್ಲಿ ಅಭಿನಯಿಸಲ್ಪಡುತ್ತಿದೆ. ಮೊದಲಿಗೆ ೧೯೯೦ರಲ್ಲಿ…