ಓದುಗರ ಪತ್ರ
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.
-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…