ಓದುಗರ ಪತ್ರ
ಬುದ್ಧನ ಚಿಂತನೆಗಳನ್ನು ಭಾರತದಿಂದ ಓಡಿಸಿದಂತೆ, ಮಹಾತ್ಮ ಗಾಂಧೀಜಿಯವರನ್ನು ಭಾರತೀಯರ ಮನಸ್ಸಿನಿಂದಿಂದಲೇ ತೆಗೆದುಹಾಕುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ಕುತಂತ್ರ ಬಯಲಾಗಿದೆ. ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ (ನರೇಗಾ) ಯಲ್ಲಿ ಗಾಂಧಿಯ ಹೆಸರನ್ನು ಕೈ ಬಿಟ್ಟು ‘ಜಿ ರಾಮ್ ಜಿ’ ಎಂಬ ಹೊಸ ನಾಮಕರಣದೊಂದಿಗೆ ಮಸೂದೆ ಲೋಕಸಭೆಯಲ್ಲಿ ಮಂಡಿಸಿರುವುದು ಖಂಡನೀಯ. ಗಾಂಧೀಜಿ ಜಾಗದಲ್ಲಿ ರಾಮನ ಜಪತಪ ಶುರುವಾಗಿರುವುದು ವಿಷಾದನೀಯ.
ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ತಿರಸ್ಕರಿಸಬೇಕು. ಇದು ಹೀಗೆಯೇ ಮುಂದುವರಿದರೆ ಮುಂದೊಂದು ದಿನ ಗಾಂಧಿ ಭವನಗಳು ಶ್ರೀರಾಮ ಭವನ ಆದರೆ ಆಶ್ಚರ್ಯ ಇಲ್ಲ. ದೇಶದ ಜಾತ್ಯತೀತ ಮನಸ್ಸುಗಳು ಪಕ್ಷಾತೀತವಾಗಿ ದನಿ ಎತ್ತದಿದ್ದರೆ ಗಾಂಧಿ ತತ್ವ, ಚಿಂತನೆಗಳಿಗೆ, ಶಾಂತಿ ಸಂದೇಶಗಳಿಗೆ ಇತಿಶ್ರೀ ಹಾಡುವ ಕಾಲ ದೂರವಿಲ್ಲ. ವಿದೇಶಿ ಗಣ್ಯರು ದಿಲ್ಲಿಗೆ ಬಂದಾಗ ಗಾಂಧಿ ಸ್ಮಾರಕಕ್ಕೆ ಭೇಟಿ ಕೊಡುವುದನ್ನೂ ನಿಷೇಽಸುವ ಕಾಲ ಬಂದರೂ ಬರಬಹುದು. ಬಹುತ್ವದ ಭಾರತ, ಹಲವು ಸಂಸ್ಕ ತಿ, ಹಲವು ಬಣ್ಣಗಳ ಭಾರತ ಬದಲಾಗದಿರಲಿ. ನಮ್ಮ ಒಗ್ಗಟ್ಟಿನ ಪ್ರತಿಭಟನೆಗಳು ದೇಶಾದ್ಯಂತ ಮೊಳಗಲಿ.
-ಆರ್.ಜಿ. ಹಳ್ಳಿ ನಾಗರಾಜ, ಬೆಂಗಳೂರು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…