ಓದುಗರ ಪತ್ರ
ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಅವರು ಒಂದನೇ ತರಗತಿ ದಾಖಲಾತಿಗೆ ೫ ವರ್ಷ ೫ ತಿಂಗಳು ಸಡಿಲಿಕೆ ಮಾಡಿರುವುದರಿಂದ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದು ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಶಿಕ್ಷಣ ಮಂತ್ರಿಗಳು ತಿಳಿಸಿದ್ದಾರೆ.
ಮುಂದಿನ ವರ್ಷ ೬ ವರ್ಷ ಆಗಿರಲೇಬೇಕು ಎಂಬ ನೀತಿಯನ್ನೇ ಜಾರಿಗೆ ತರುವುದಾಗಿ ತಿಳಿಸಿದ್ದಾರೆ. ಆದರೆ ಈ ಕ್ರಮ ಸರಿಯಲ್ಲ. ಮುಂದಿನ ವರ್ಷವೂ ಪೋಷಕರು ಇದೇ ರೀತಿ ತೊಂದರೆಗೆ ಸಿಲುಕುತ್ತಾರೆ. ಪೋಷಕರು ನೆಮ್ಮದಿಯಿಂದ ಇರಬೇಕಾದರೆ ರಾಜ್ಯದಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ೫ ವರ್ಷ ೫ ತಿಂಗಳು ಆಗಿರಬೇಕು ಎಂಬ ನಿಯಮವನ್ನು ಶಾಶ್ವತವಾಗಿ ಜಾರಿಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ.
– ಎಂ. ಎಸ್. ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…