ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮುಖ್ಯ ರಸ್ತೆಯ (ಕೆಎಸ್ ಆರ್ಟಿಸಿ ಡಿಪೋ ರಸ್ತೆ) ಮೂರು ಕಡೆಗಳಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡುತ್ತಿರುವವರು ಮುಖ್ಯ ರಸ್ತೆಗೆ ಹೊಂದಿಕೊಂಡಂತೆಯೇ ಸುಮಾರು ೧೦ ಅಡಿಗಳ ಅಂತರದಲ್ಲಿ ವಾಚ್ಮ್ಯಾನ್ ಶೆಡ್ಡುಗಳನ್ನು ಕಟ್ಟಿಕೊಂಡಿದ್ದು, ಇದರಿಂದಾಗಿ ಪಾದಚಾರಿಗಳಿಗೆ ಕಿರಿಕಿರಿಯಾಗುವ ಜತೆಗೆ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ.
ಈ ಮುಖ್ಯ ರಸ್ತೆಯು ಕೆಎಸ್ಆರ್ಟಿಸಿ ಬಸ್ ಡಿಪೋಗೂ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲದೆ ವಾಣಿಜ್ಯ ಕಾಂಪ್ಲೆಕ್ಸ್ಗಳು ಇರುವುದರಿಂದ ಸದಾ ಜನನಿಬಿಡ ಪ್ರದೇಶವಾಗಿರುತ್ತದೆ. ಇಂತಹ ರಸ್ತೆಯಲ್ಲಿ ಫುಟ್ಪಾತ್ಅನ್ನು ಆಕ್ರಮಿಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇನ್ನು ಈ ರಸ್ತೆಯಲ್ಲಿ ಮಹಾನಗರ ಪಾಲಿಕೆಯ ಕೆಲ ಅಽಕಾರಿಗಳು ನಿತ್ಯ ಓಡಾಡುತ್ತಿದ್ದರೂ ಈ ಖಾಸಗಿ ಕಟ್ಟಡಗಳ ಶೆಡ್ಡುಗಳನ್ನು ಕಂಡೂ ಕಾಣದಂತಿರುವುದು ಆಶ್ಚರ್ಯಕರ. ಪಾಲಿಕೆಯವರು ಈಗಲಾದರೂ ಇತ್ತ ಗಮನಹರಿಸಿ ಈ ಶೆಡ್ಡುಗಳನ್ನು ತೆರವುಗೊಳಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…