ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್ ಮುಖ್ಯ ರಸ್ತೆಯ (ಕೆಎಸ್ ಆರ್ಟಿಸಿ ಡಿಪೋ ರಸ್ತೆ) ಮೂರು ಕಡೆಗಳಲ್ಲಿ ಬೃಹತ್ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಾಣ ಮಾಡುತ್ತಿರುವವರು ಮುಖ್ಯ ರಸ್ತೆಗೆ ಹೊಂದಿಕೊಂಡಂತೆಯೇ ಸುಮಾರು ೧೦ ಅಡಿಗಳ ಅಂತರದಲ್ಲಿ ವಾಚ್ಮ್ಯಾನ್ ಶೆಡ್ಡುಗಳನ್ನು ಕಟ್ಟಿಕೊಂಡಿದ್ದು, ಇದರಿಂದಾಗಿ ಪಾದಚಾರಿಗಳಿಗೆ ಕಿರಿಕಿರಿಯಾಗುವ ಜತೆಗೆ ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ.
ಈ ಮುಖ್ಯ ರಸ್ತೆಯು ಕೆಎಸ್ಆರ್ಟಿಸಿ ಬಸ್ ಡಿಪೋಗೂ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಅಲ್ಲದೆ ವಾಣಿಜ್ಯ ಕಾಂಪ್ಲೆಕ್ಸ್ಗಳು ಇರುವುದರಿಂದ ಸದಾ ಜನನಿಬಿಡ ಪ್ರದೇಶವಾಗಿರುತ್ತದೆ. ಇಂತಹ ರಸ್ತೆಯಲ್ಲಿ ಫುಟ್ಪಾತ್ಅನ್ನು ಆಕ್ರಮಿಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇನ್ನು ಈ ರಸ್ತೆಯಲ್ಲಿ ಮಹಾನಗರ ಪಾಲಿಕೆಯ ಕೆಲ ಅಽಕಾರಿಗಳು ನಿತ್ಯ ಓಡಾಡುತ್ತಿದ್ದರೂ ಈ ಖಾಸಗಿ ಕಟ್ಟಡಗಳ ಶೆಡ್ಡುಗಳನ್ನು ಕಂಡೂ ಕಾಣದಂತಿರುವುದು ಆಶ್ಚರ್ಯಕರ. ಪಾಲಿಕೆಯವರು ಈಗಲಾದರೂ ಇತ್ತ ಗಮನಹರಿಸಿ ಈ ಶೆಡ್ಡುಗಳನ್ನು ತೆರವುಗೊಳಿಸಬೇಕಿದೆ.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…
ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…
ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…