Andolana originals

ಓದುಗರ ಪತ್ರ: ಸಾರಿಗೆ ಬಸ್‌ಗಳ ಮೆಟ್ಟಿಲು ನವೀಕರಿಸಿ

ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರೂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸುತ್ತಿದ್ದಾರೆ. ಆದರೆ ಕೆಲ ಬಸ್ಸುಗಳು ಹಳೆಯ ಮಾದರಿಯಲ್ಲೇ ಇವೆ. ಮೆಟ್ಟಿಲುಗಳು ಅತಿ ಎತ್ತರದಲ್ಲಿ ಇರುತ್ತವೆ. ಇದರಿಂದ ವಯಸ್ಸಾದವರು, ಗರ್ಭಿಣಿಯರು, ವಿಶೇಷ ಚೇತನರು, ಅನಾರೋಗ್ಯ ಪೀಡಿತರಿಗೆ ಅನನುಕೂಲವಾಗುತ್ತಿದೆ. ಬಸ್ ಹತ್ತುವುದಕ್ಕೂ ಇಳಿಯುವುದಕ್ಕೂ ಕಷ್ಟವಾಗುತ್ತಿದೆ. ಇಳಿಯುವುದು ತಡವಾದರೆ ಸಹಜವಾಗಿಯೇ ಕಂಡಕ್ಟರ್ ಸಿಟ್ಟಾಗುತ್ತಾರೆ. ಪ್ರಯಾಣಿಕರು ಇಳಿಯುವ ಬರದಲ್ಲಿ ಕೆಳಗೆ ಬಿದ್ದ ಉದಾಹರಣೆಗಳೂ ಇವೆ. ಆದ್ದರಿಂದ ಹಳೆಯ ಬಸ್ಸುಗಳ ಮೆಟ್ಟಿಲುಗಳನ್ನು ಕೆಳಮಟ್ಟಿಗೆ ಇಳಿಸಿದರೆ ಎಲ್ಲರಿಗೂ ಉಪಯೋಗವಾಗುತ್ತದೆ. ಅನಾಹುತಗಳು ತಪ್ಪಿದಂತಾಗುತ್ತದೆ.

– ಎಂ.ಎಸ್.ಉಷಾ ಪ್ರಕಾಶ್, ಮೈಸೂರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

33 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

51 mins ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

1 hour ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

1 hour ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago