ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರೂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸುತ್ತಿದ್ದಾರೆ. ಆದರೆ ಕೆಲ ಬಸ್ಸುಗಳು ಹಳೆಯ ಮಾದರಿಯಲ್ಲೇ ಇವೆ. ಮೆಟ್ಟಿಲುಗಳು ಅತಿ ಎತ್ತರದಲ್ಲಿ ಇರುತ್ತವೆ. ಇದರಿಂದ ವಯಸ್ಸಾದವರು, ಗರ್ಭಿಣಿಯರು, ವಿಶೇಷ ಚೇತನರು, ಅನಾರೋಗ್ಯ ಪೀಡಿತರಿಗೆ ಅನನುಕೂಲವಾಗುತ್ತಿದೆ. ಬಸ್ ಹತ್ತುವುದಕ್ಕೂ ಇಳಿಯುವುದಕ್ಕೂ ಕಷ್ಟವಾಗುತ್ತಿದೆ. ಇಳಿಯುವುದು ತಡವಾದರೆ ಸಹಜವಾಗಿಯೇ ಕಂಡಕ್ಟರ್ ಸಿಟ್ಟಾಗುತ್ತಾರೆ. ಪ್ರಯಾಣಿಕರು ಇಳಿಯುವ ಬರದಲ್ಲಿ ಕೆಳಗೆ ಬಿದ್ದ ಉದಾಹರಣೆಗಳೂ ಇವೆ. ಆದ್ದರಿಂದ ಹಳೆಯ ಬಸ್ಸುಗಳ ಮೆಟ್ಟಿಲುಗಳನ್ನು ಕೆಳಮಟ್ಟಿಗೆ ಇಳಿಸಿದರೆ ಎಲ್ಲರಿಗೂ ಉಪಯೋಗವಾಗುತ್ತದೆ. ಅನಾಹುತಗಳು ತಪ್ಪಿದಂತಾಗುತ್ತದೆ.
– ಎಂ.ಎಸ್.ಉಷಾ ಪ್ರಕಾಶ್, ಮೈಸೂರು.
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…