ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಡಿಯಲ್ಲಿ ಎಲ್ಲಾ ವಯೋಮಾನದ ಮಹಿಳೆಯರೂ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಪ್ರಯಾಣಿಸುತ್ತಿದ್ದಾರೆ. ಆದರೆ ಕೆಲ ಬಸ್ಸುಗಳು ಹಳೆಯ ಮಾದರಿಯಲ್ಲೇ ಇವೆ. ಮೆಟ್ಟಿಲುಗಳು ಅತಿ ಎತ್ತರದಲ್ಲಿ ಇರುತ್ತವೆ. ಇದರಿಂದ ವಯಸ್ಸಾದವರು, ಗರ್ಭಿಣಿಯರು, ವಿಶೇಷ ಚೇತನರು, ಅನಾರೋಗ್ಯ ಪೀಡಿತರಿಗೆ ಅನನುಕೂಲವಾಗುತ್ತಿದೆ. ಬಸ್ ಹತ್ತುವುದಕ್ಕೂ ಇಳಿಯುವುದಕ್ಕೂ ಕಷ್ಟವಾಗುತ್ತಿದೆ. ಇಳಿಯುವುದು ತಡವಾದರೆ ಸಹಜವಾಗಿಯೇ ಕಂಡಕ್ಟರ್ ಸಿಟ್ಟಾಗುತ್ತಾರೆ. ಪ್ರಯಾಣಿಕರು ಇಳಿಯುವ ಬರದಲ್ಲಿ ಕೆಳಗೆ ಬಿದ್ದ ಉದಾಹರಣೆಗಳೂ ಇವೆ. ಆದ್ದರಿಂದ ಹಳೆಯ ಬಸ್ಸುಗಳ ಮೆಟ್ಟಿಲುಗಳನ್ನು ಕೆಳಮಟ್ಟಿಗೆ ಇಳಿಸಿದರೆ ಎಲ್ಲರಿಗೂ ಉಪಯೋಗವಾಗುತ್ತದೆ. ಅನಾಹುತಗಳು ತಪ್ಪಿದಂತಾಗುತ್ತದೆ.
– ಎಂ.ಎಸ್.ಉಷಾ ಪ್ರಕಾಶ್, ಮೈಸೂರು.
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…