ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ.
ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ ಹಳೆಯ ಪೈಪ್ಲೈನ್ಗಳು ಅಲ್ಲಲ್ಲಿ ಒಡೆದುಹೋಗಿವೆ.
ಬಂಗ್ಲಿಹುಂಡಿಯ ರೈತ ಸಂಪರ್ಕ ಕೇಂದ್ರದ ಬಳಿಯೂ ಜೆಜೆಎಂ ಕಾಮಗಾರಿ ಮಾಡಲಾಗಿದ್ದು, ಈ ವೇಳೆ ಒಡೆದುಹೋದ ಪೈಪನ್ನು ಸರಿಪಡಿಸದೆ ಅದರ ಮೇಲೆಯೇ ಕಾಂಕ್ರೀಟ್ ಹಾಕಿ ಮುಚ್ಚಿರುವುದರಿಂದ ಕಳೆದ ಎರಡು ತಿಂಗಳುಗಳಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನೊಂದಿಗೆ ಮಣ್ಣು ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ವಿಧಿ ಇಲ್ಲದೆ ಸಾರ್ವಜನಿಕರು ಕಲುಷಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ನೀರಿನ ಪೈನ್ಲೈನನ್ನು ಸರಿಪಡಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…