Andolana originals

ಓದುಗರ ಪತ್ರ: ನೀರಿನ ಪೈಪ್‌ಲೈನ್ ಸರಿಪಡಿಸಿ

ಎಚ್‌.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಬಂಗ್ಲಿಹುಂಡಿಯಲ್ಲಿ ಕುಡಿಯುವ ನೀರಿನ ಫೈಟ್ ಒಡೆದುಹೋಗಿ ತಿಂಗಳುಗಳೇ ಕಳೆದಿದ್ದು, ಕುಡಿಯುವ ನೀರು ಪೋಲಾಗುತ್ತಿದೆ.
ಅಂತರಸಂತೆಯ ಎಲ್ಲ ಬಡಾವಣೆಗಳಲ್ಲಿಯೂ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ಕಾಮಗಾರಿಯ ವೇಳೆ ಕುಡಿಯುವ ನೀರಿನ ಹಳೆಯ ಪೈಪ್‌ಲೈನ್‌ಗಳು ಅಲ್ಲಲ್ಲಿ ಒಡೆದುಹೋಗಿವೆ.
ಬಂಗ್ಲಿಹುಂಡಿಯ ರೈತ ಸಂಪರ್ಕ ಕೇಂದ್ರದ ಬಳಿಯೂ ಜೆಜೆಎಂ ಕಾಮಗಾರಿ ಮಾಡಲಾಗಿದ್ದು, ಈ ವೇಳೆ ಒಡೆದುಹೋದ ಪೈಪನ್ನು ಸರಿಪಡಿಸದೆ ಅದರ ಮೇಲೆಯೇ ಕಾಂಕ್ರೀಟ್ ಹಾಕಿ ಮುಚ್ಚಿರುವುದರಿಂದ ಕಳೆದ ಎರಡು ತಿಂಗಳುಗಳಿಂದ ನೀರು ಸೋರಿಕೆಯಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರಿನೊಂದಿಗೆ ಮಣ್ಣು ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ವಿಧಿ ಇಲ್ಲದೆ ಸಾರ್ವಜನಿಕರು ಕಲುಷಿತ ನೀರನ್ನು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಯವರ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟವರು ಕೂಡಲೇ ನೀರಿನ ಪೈನ್‌ಲೈನನ್ನು ಸರಿಪಡಿಸಬೇಕಿದೆ.
-ರಾಜೇಶ್, ಅಂತರಸಂತೆ, ಎಚ್.ಡಿ.ಕೋಟೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

2 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

2 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

2 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

2 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

2 hours ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

3 hours ago