Andolana originals

ಓದುಗರ ಪತ್ರ: ಮುಳ್ಳೂರು ರಸ್ತೆ ದುರಸ್ತಿ ಮಾಡಿ

ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ ಜೀವ ಕೈಯಲ್ಲಿ ಹಿಡಿದು ಸಂಚರಿಸುವುದು ಅನಿವಾರ್ಯವಾಗಿದೆ.

ಮಳೆ ಬಂದಾಗ ರಸ್ತೆ ಕೆಸರುಗದ್ದೆಯಂತೆ ಆಗುತ್ತದೆ. ಗುಂಡಿಗಳೂ ಕಾಣುವುದಿಲ್ಲ. ಇಂತಹ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸಬೇಕೆಂದರೆ ಸರ್ಕಸ್ ಮಾಡಬೇಕು. ಇಲ್ಲಿ ನಡೆದುಕೊಂಡು ಹೋಗುವುದೂ ದುಸ್ತರವಾಗಿದೆ. ಊರಿನೊಳಗಡೆಗೂ ಪ್ರತಿದಿನ ಮೂರ‍್ನಾಲ್ಕು ಬಾರಿ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತದೆ. ಕೆಲವೊಮ್ಮೆ ಕಾರುಗಳೂ ಓಡಾಡುತ್ತವೆ. ಆದರೆ, ಒಮ್ಮೆ ಈ ರಸ್ತೆಯಲ್ಲಿ ಸಂಚರಿಸಿದರೆ, ಮತ್ತೆಂದೂ ಈ ಕಡೆಗೆ ಬರಬಾರದು ಎಂಬಂತಹ ಕೆಟ್ಟ ಅನುಭವ ಆಗುತ್ತದೆ.

ಈ ರಸ್ತೆ ಅಭಿವೃದ್ಧಿಗಾಗಿ ಸ್ಥಳೀಯ ಶಾಸಕರು ಶಂಕುಸ್ಥಾಪನೆ ನೆರವೇರಿಸಿ ತಿಂಗಳುಗಳೇ ಆಗಿವೆ. ಆದರೆ, ಇನ್ನೂ ಕಾಮಗಾರಿ ಆರಂಭವಾಗಿಲ್ಲ . ಇದು ನೀರಾವರಿ ಪ್ರದೇಶವಾಗಿದ್ದು, ಕೃಷಿ ಚಟುವಟಿಕೆ ಸಮಯದಲ್ಲಿ ರಸ್ತೆಯ ಇಕ್ಕೆಲದಲ್ಲಿ ನೀರು ಹರಿಯುತ್ತದೆ. ಇದರಿಂದ ನಿಧಾನವಾಗಿ ತೇವಾಂಶ ರಸ್ತೆಯನ್ನು ಆವರಿಸಿ, ಡಾಂಬರು ಸಹಿತ ಕಿತ್ತುಬರುತ್ತದೆ. ರಸ್ತೆಯನ್ನು ದುರಸ್ತಿಪಡಿಸಿದರೂ ಒಂದೆರಡು ವರ್ಷಗಳಲ್ಲೇ ಇದು ಪುನರಾವರ್ತನೆ ಆಗುತ್ತಲೇ ಇರುತ್ತದೆ. ಹಾಗಾಗಿ ರಸ್ತೆಯ ಇಕ್ಕೆಲದಲ್ಲೂ ಸಿಮೆಂಟ್ ಕಾಂಕ್ರೀಟ್ ಚರಂಡಿ ನಿರ್ಮಿಸಿ, ಗದ್ದೆಗಳಿಂದ ರಸ್ತೆಗೆ ಬರುವ ನೀರು ಅದರಲ್ಲಿ ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಹಾಗಾದಾಗ ರಸ್ತೆ ಹೆಚ್ಚು ವರ್ಷಗಳು ಜನರ ಉಪಯೋಗಕ್ಕೆ ಬರುತ್ತದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಽಗಳು, ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು.

-ಸಂತೋಷ್ ಕುಮಾರ್, ಮುಳ್ಳೂರು, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

4 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago