Andolana originals

ಓದುಗರ ಪತ್ರ: ಮುಳ್ಳೂರು ರಸ್ತೆ ದುರಸ್ತಿ ಮಾಡಿ

ನಂಜನಗೂಡು ತಾಲ್ಲೂಕು ಮುಳ್ಳೂರು ಗ್ರಾಮದ ಮುಖ್ಯ ರಸ್ತೆ ತೀರಾ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಂಜನಗೂಡಿನಿಂದ ತಿ.ನರಸೀಪುರ ಮಾರ್ಗದಲ್ಲಿ ಸುಮಾರು ೬ ಕಿ.ಮೀ. ದೂರದಲ್ಲಿ ಮುಳ್ಳೂರು ಗ್ರಾಮದ ಗೇಟ್ ಇದ್ದು, ಅಲ್ಲಿಂದ ಸುಮಾರು ಒಂದು ಮೈಲಿ ದೂರ ಹಾಳಾದ ರಸ್ತೆಯಲ್ಲೇ ಜೀವ ಕೈಯಲ್ಲಿ ಹಿಡಿದು ಸಂಚರಿಸುವುದು ಅನಿವಾರ್ಯವಾಗಿದೆ.

ಮಳೆ ಬಂದಾಗ ರಸ್ತೆ ಕೆಸರುಗದ್ದೆಯಂತೆ ಆಗುತ್ತದೆ. ಗುಂಡಿಗಳೂ ಕಾಣುವುದಿಲ್ಲ. ಇಂತಹ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರರು ಸಂಚರಿಸಬೇಕೆಂದರೆ ಸರ್ಕಸ್ ಮಾಡಬೇಕು. ಇಲ್ಲಿ ನಡೆದುಕೊಂಡು ಹೋಗುವುದೂ ದುಸ್ತರವಾಗಿದೆ. ಊರಿನೊಳಗಡೆಗೂ ಪ್ರತಿದಿನ ಮೂರ‍್ನಾಲ್ಕು ಬಾರಿ ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತದೆ. ಕೆಲವೊಮ್ಮೆ ಕಾರುಗಳೂ ಓಡಾಡುತ್ತವೆ. ಆದರೆ, ಒಮ್ಮೆ ಈ ರಸ್ತೆಯಲ್ಲಿ ಸಂಚರಿಸಿದರೆ, ಮತ್ತೆಂದೂ ಈ ಕಡೆಗೆ ಬರಬಾರದು ಎಂಬಂತಹ ಕೆಟ್ಟ ಅನುಭವ ಆಗುತ್ತದೆ.

ಈ ರಸ್ತೆ ಅಭಿವೃದ್ಧಿಗಾಗಿ ಸ್ಥಳೀಯ ಶಾಸಕರು ಶಂಕುಸ್ಥಾಪನೆ ನೆರವೇರಿಸಿ ತಿಂಗಳುಗಳೇ ಆಗಿವೆ. ಆದರೆ, ಇನ್ನೂ ಕಾಮಗಾರಿ ಆರಂಭವಾಗಿಲ್ಲ . ಇದು ನೀರಾವರಿ ಪ್ರದೇಶವಾಗಿದ್ದು, ಕೃಷಿ ಚಟುವಟಿಕೆ ಸಮಯದಲ್ಲಿ ರಸ್ತೆಯ ಇಕ್ಕೆಲದಲ್ಲಿ ನೀರು ಹರಿಯುತ್ತದೆ. ಇದರಿಂದ ನಿಧಾನವಾಗಿ ತೇವಾಂಶ ರಸ್ತೆಯನ್ನು ಆವರಿಸಿ, ಡಾಂಬರು ಸಹಿತ ಕಿತ್ತುಬರುತ್ತದೆ. ರಸ್ತೆಯನ್ನು ದುರಸ್ತಿಪಡಿಸಿದರೂ ಒಂದೆರಡು ವರ್ಷಗಳಲ್ಲೇ ಇದು ಪುನರಾವರ್ತನೆ ಆಗುತ್ತಲೇ ಇರುತ್ತದೆ. ಹಾಗಾಗಿ ರಸ್ತೆಯ ಇಕ್ಕೆಲದಲ್ಲೂ ಸಿಮೆಂಟ್ ಕಾಂಕ್ರೀಟ್ ಚರಂಡಿ ನಿರ್ಮಿಸಿ, ಗದ್ದೆಗಳಿಂದ ರಸ್ತೆಗೆ ಬರುವ ನೀರು ಅದರಲ್ಲಿ ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಹಾಗಾದಾಗ ರಸ್ತೆ ಹೆಚ್ಚು ವರ್ಷಗಳು ಜನರ ಉಪಯೋಗಕ್ಕೆ ಬರುತ್ತದೆ. ಈ ಬಗ್ಗೆ ಸ್ಥಳೀಯ ಜನಪ್ರತಿನಿಽಗಳು, ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು.

-ಸಂತೋಷ್ ಕುಮಾರ್, ಮುಳ್ಳೂರು, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

8 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

8 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

9 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

9 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

10 hours ago