Mysore
16
few clouds

Social Media

ಗುರುವಾರ, 25 ಡಿಸೆಂಬರ್ 2025
Light
Dark

ಓದುಗರ ಪತ್ರ: ಮೈಸೂರು ನಗರ ಬಸ್‌ ನಿಲ್ದಾಣದ ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ನಗರ ಬಸ್ ನಿಲ್ದಾಣದೊಳಗಿನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು, ರಸ್ತೆಗೆ ಹಾಕಿದ್ದ ಡಾಂಬರ್ ಕಿತ್ತುಬಂದಿದೆ. ಅಲ್ಲದೆ ಅಲ್ಲಿನ ಕಲ್ಲುಗಳೆಲ್ಲ ರಸ್ತೆಗೆ ಹರಡಿಕೊಂಡಿವೆ.

ನಿತ್ಯ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಪ್ರಯಾಣಿಕರು ಈ ನಿಲ್ದಾಣದ ಮೂಲಕ ಬಸ್ ಹತ್ತಿ ನಗರದ ವಿವಿಧ ಭಾಗಗಳಿಗೆ ಪ್ರಯಾಣಿಸುತ್ತಾರೆ. ಇಂತಹ ಬಸ್ ನಿಲ್ದಾಣದಲ್ಲಿ ಎಲ್ಲ ಮೂಲಸೌಕರ್ಯಗಳಿರಬೇಕಿತ್ತು.

ಆದರೆ ಇಲ್ಲಿ ನಿಲ್ದಾಣದ ರಸ್ತೆಗಳೇ ಗುಂಡಿ ಬಿದ್ದಿದ್ದು, ಜನರು ಓಡಾಡಲು ಕಷ್ಟವಾಗುತ್ತಿದೆ. ಮಳೆಗಾಲದಲ್ಲಂತೂ ಈ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಬಸ್‌ಗಳು ಸಂಚರಿಸಿದಂತೆಲ್ಲ ಆ ನೀರೆಲ್ಲ ಪ್ರಯಾಣಿಕರಿಗೆ ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕೂಡಲೇ ನಿಲ್ದಾಣದೊಳಗಿನ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿಪಡಿಸಬೇಕಿದೆ.

-ಬಿ. ಎಂ. ಅನುಷ, ಪತ್ರಿಕೋದ್ಯಮ ವಿಭಾಗ, ಮಾನಸ ಗಂಗೋತ್ರಿ, ಮೈಸೂರು

 

Tags:
error: Content is protected !!