ಮೈಸೂರಿನ ನಗರ ಬಸ್ ನಿಲ್ದಾಣದೊಳಗಿನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು, ರಸ್ತೆಗೆ ಹಾಕಿದ್ದ ಡಾಂಬರ್ ಕಿತ್ತುಬಂದಿದೆ. ಅಲ್ಲದೆ ಅಲ್ಲಿನ ಕಲ್ಲುಗಳೆಲ್ಲ ರಸ್ತೆಗೆ ಹರಡಿಕೊಂಡಿವೆ.
ನಿತ್ಯ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಪ್ರಯಾಣಿಕರು ಈ ನಿಲ್ದಾಣದ ಮೂಲಕ ಬಸ್ ಹತ್ತಿ ನಗರದ ವಿವಿಧ ಭಾಗಗಳಿಗೆ ಪ್ರಯಾಣಿಸುತ್ತಾರೆ. ಇಂತಹ ಬಸ್ ನಿಲ್ದಾಣದಲ್ಲಿ ಎಲ್ಲ ಮೂಲಸೌಕರ್ಯಗಳಿರಬೇಕಿತ್ತು.
ಆದರೆ ಇಲ್ಲಿ ನಿಲ್ದಾಣದ ರಸ್ತೆಗಳೇ ಗುಂಡಿ ಬಿದ್ದಿದ್ದು, ಜನರು ಓಡಾಡಲು ಕಷ್ಟವಾಗುತ್ತಿದೆ. ಮಳೆಗಾಲದಲ್ಲಂತೂ ಈ ಗುಂಡಿಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ಬಸ್ಗಳು ಸಂಚರಿಸಿದಂತೆಲ್ಲ ಆ ನೀರೆಲ್ಲ ಪ್ರಯಾಣಿಕರಿಗೆ ರಾಚುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಕೂಡಲೇ ನಿಲ್ದಾಣದೊಳಗಿನ ಗುಂಡಿಬಿದ್ದ ರಸ್ತೆಗಳನ್ನು ದುರಸ್ತಿಪಡಿಸಬೇಕಿದೆ.
-ಬಿ. ಎಂ. ಅನುಷ, ಪತ್ರಿಕೋದ್ಯಮ ವಿಭಾಗ, ಮಾನಸ ಗಂಗೋತ್ರಿ, ಮೈಸೂರು
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…
ಗಿರೀಶ್ ಹುಣಸೂರು ಮೈಸೂರು: ಮಿತ ವೇತನದ ಹೆಸರಿನಲ್ಲಿ ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಸಹಾಯಕರು ಮೃತರಾದಲ್ಲಿ, ನಿವೃತ್ತಿ ಹೊಂದಿದಲ್ಲಿ ಗರಿಷ್ಟ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಕಲಿಕೆಯಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲಾ ಮಕ್ಕಳಿಗೆ ತರಬೇತಿ ಕೆ.ಆರ್.ನಗರ: ಕಲಿಕೆಯಲ್ಲಿ ಹಿಂದೆ ಬಿದ್ದಿರುವ ಸರ್ಕಾರಿ…
ದಿನೇಶ್ಕುಮಾರ್ ಹೆಚ್.ಎಸ್. ಉದ್ಯಾನ ನಿರ್ಮಾಣಕ್ಕೂ ಮುನ್ನ ವ್ಯಾಯಾಮ ಪರಿಕರ ಅಳವಡಿಸಿದ ನಗರಪಾಲಿಕೆಯ ಅಧಿಕಾರಿಗಳು ಮೈಸೂರು: ಕೂಸು ಹುಟ್ಟುವ ಮುಂಚೆ ಕುಲಾವಿ…
ಕೆ.ಬಿ.ರಮೇಶನಾಯಕ ಈ ಬಾರಿಯೂ ಆಡಳಿತಾಧಿಕಾರಿಯಿಂದಲೇ ಬಜೆಟ್ ಮಂಡನೆ ಯಾವುದೇ ಕ್ಷಣದಲ್ಲಿ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಜಾರಿ ಮೈಸೂರು: ರಾಜ್ಯ ಸರ್ಕಾರ…