Andolana originals

ಓದುಗರ ಪತ್ರ| ಅಣೆಕಟ್ಟೆಗಳ ದುರಸ್ತಿ ಅಗತ್ಯ

ರಾಜ್ಯದ ಅಣೆಕಟ್ಟೆಗಳ ಪೈಕಿ ಬಹುತೇಕ ಅಣೆಕಟ್ಟೆಗಳು ನಿರ್ಮಾ ಣಗೊಂಡು 50 ವರ್ಷಗಳ ಮೇಲಾಗಿದ್ದು, ನೂರು ವರ್ಷಗಳನ್ನು ಪೂರೈಸಿರುವ ಅಣೆಕಟ್ಟೆಗಳೂ ಇರುವುದರಿಂದ ಅವು ಗಳನ್ನು ಕಾಲ ಕಾಲಕ್ಕೆ ದುರಸ್ತಿಗೊಳಿಸುವುದು ಅಗತ್ಯ. ತುಂಗಭದ್ರ ಜಲಾಶಯವನ್ನು 1953ರಲ್ಲಿ ನಿರ್ಮಿಸಲಾಗಿದೆ. ಈ ಜಲಾಶಯದ ಒಂದು ಕ್ರಸ್ಟ್ ಗೇಟ್ ಇತ್ತೀಚೆಗೆ ಮುರಿದುಬಿದ್ದು ಆತಂಕ ಸೃಷ್ಟಿಸಿತ್ತು. ಅದೇ ರೀತಿ ಕೆಆರ್‌ಎಸ್ ಜಲಾಶಯವು ನಿರ್ಮಾಣವಾಗಿ ಈಗಾಗಲೇ ನೂರು ವರ್ಷಗಳನ್ನು ಪೂರೈಸಿದೆ. ವೇದಾವತಿನದಿಗೆವಾಣಿವಿಲಾಸಸಾಗರಜಲಾಶಯನಿರ್ಮಾಣವಾಗಿಯೂ 125 ವರ್ಷಗಳಾಗಿವೆ. ಇನ್ನು ಕಬಿನಿ, ನುಗು, ಹಾರಂಗಿ ಜಲಾಶಯಗಳಿಗೂ ಏನಿಲ್ಲ ಎಂದರೂ 50 ವರ್ಷಗಳಾಗಿವೆ.

ರಾಜ್ಯ ಸರ್ಕಾರವು ಈ ಜಲಾಶಯಗಳನ್ನು ಕಾಲಕಾಲಕ್ಕೆ ದುರಸ್ತಿಗೊಳಿಸಿ ಸರಿಯಾಗಿ ನಿರ್ವಹಿಸಬೇಕಿತ್ತು. ಆದರೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಅನಿಸುತ್ತದೆ. ಸದ್ಯ ತುಂಗಭದ್ರ ಜಲಾಶಯದ ಗೇಟ್ ಮುರಿದುಬಿದ್ದಿರುವುದುಹಾಗೂಕಬಿನಿಜಲಾಶಯವುಸೋರುತ್ತಿರುವುದು ಎಚ್ಚರಿಕೆಯ ಘಂಟೆಯಾಗಿದ್ದು, ಅನಾಹುತಗಳು ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಜಲಾಶಯಗಳನ್ನು ದುರಸ್ತಿಗೊಳಿಸಬೇಕಿದೆ.

-ಎನ್.ಆರ್.ಚೇತನ್, ನಗರ್ಲೆ, ನಂಜನಗೂಡು.

ಆಂದೋಲನ ಡೆಸ್ಕ್

Recent Posts

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

30 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

1 hour ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

1 hour ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

3 hours ago