Andolana originals

ಓದುಗರ ಪತ್ರ| ಅಣೆಕಟ್ಟೆಗಳ ದುರಸ್ತಿ ಅಗತ್ಯ

ರಾಜ್ಯದ ಅಣೆಕಟ್ಟೆಗಳ ಪೈಕಿ ಬಹುತೇಕ ಅಣೆಕಟ್ಟೆಗಳು ನಿರ್ಮಾ ಣಗೊಂಡು 50 ವರ್ಷಗಳ ಮೇಲಾಗಿದ್ದು, ನೂರು ವರ್ಷಗಳನ್ನು ಪೂರೈಸಿರುವ ಅಣೆಕಟ್ಟೆಗಳೂ ಇರುವುದರಿಂದ ಅವು ಗಳನ್ನು ಕಾಲ ಕಾಲಕ್ಕೆ ದುರಸ್ತಿಗೊಳಿಸುವುದು ಅಗತ್ಯ. ತುಂಗಭದ್ರ ಜಲಾಶಯವನ್ನು 1953ರಲ್ಲಿ ನಿರ್ಮಿಸಲಾಗಿದೆ. ಈ ಜಲಾಶಯದ ಒಂದು ಕ್ರಸ್ಟ್ ಗೇಟ್ ಇತ್ತೀಚೆಗೆ ಮುರಿದುಬಿದ್ದು ಆತಂಕ ಸೃಷ್ಟಿಸಿತ್ತು. ಅದೇ ರೀತಿ ಕೆಆರ್‌ಎಸ್ ಜಲಾಶಯವು ನಿರ್ಮಾಣವಾಗಿ ಈಗಾಗಲೇ ನೂರು ವರ್ಷಗಳನ್ನು ಪೂರೈಸಿದೆ. ವೇದಾವತಿನದಿಗೆವಾಣಿವಿಲಾಸಸಾಗರಜಲಾಶಯನಿರ್ಮಾಣವಾಗಿಯೂ 125 ವರ್ಷಗಳಾಗಿವೆ. ಇನ್ನು ಕಬಿನಿ, ನುಗು, ಹಾರಂಗಿ ಜಲಾಶಯಗಳಿಗೂ ಏನಿಲ್ಲ ಎಂದರೂ 50 ವರ್ಷಗಳಾಗಿವೆ.

ರಾಜ್ಯ ಸರ್ಕಾರವು ಈ ಜಲಾಶಯಗಳನ್ನು ಕಾಲಕಾಲಕ್ಕೆ ದುರಸ್ತಿಗೊಳಿಸಿ ಸರಿಯಾಗಿ ನಿರ್ವಹಿಸಬೇಕಿತ್ತು. ಆದರೆ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಅನಿಸುತ್ತದೆ. ಸದ್ಯ ತುಂಗಭದ್ರ ಜಲಾಶಯದ ಗೇಟ್ ಮುರಿದುಬಿದ್ದಿರುವುದುಹಾಗೂಕಬಿನಿಜಲಾಶಯವುಸೋರುತ್ತಿರುವುದು ಎಚ್ಚರಿಕೆಯ ಘಂಟೆಯಾಗಿದ್ದು, ಅನಾಹುತಗಳು ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಜಲಾಶಯಗಳನ್ನು ದುರಸ್ತಿಗೊಳಿಸಬೇಕಿದೆ.

-ಎನ್.ಆರ್.ಚೇತನ್, ನಗರ್ಲೆ, ನಂಜನಗೂಡು.

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago