ಓದುಗರ ಪತ್ರ
ಮೈಸೂರಿನ ವಿಜಯನಗರದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ರಸ್ತೆಗೆ ಹೊಂದಿಕೊಂಡಂತಿರುವ ಗೇಟ್ ಬಳಿ ಮ್ಯಾನ್ಹೋಲ್ ಸೋರಿಕೆಯಾಗುತ್ತಿದ್ದು, ಕಳೆದ ಐದು-ಆರು ದಿನಗಳಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದ್ದು, ದುರ್ವಾಸನೆ ಬೀರಲಾರಂಭಿಸಿದೆ.
ಇಲ್ಲಿ ಇಂಜಿನಿಯರಿಂಗ್ ಕಾಲೇಜು ಮತ್ತು ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಇರುವುದರಿಂದ ಇಲ್ಲಿಗೆ ಬರುವ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಕೊಳಚೆ ನೀರನ್ನು ತುಳಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ದುರ್ವಾಸನೆ ತಾಳಲಾರದೆ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಿದೆ.
ಇತ್ತೀಚೆಗೆ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಅನೈರ್ಮಲ್ಯ ವಾತಾವರಣದಿಂದಾಗಿ ಸಾರ್ವಜನಿಕರಿಗೆ ರೋಗಗಳು ಉಲ್ಬಣಗೊಳ್ಳುವ ಆತಂಕ ಎದುರಾಗಿದೆ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕಾದ ಮೈಸೂರು ಮಹಾನಗರ ಪಾಲಿಕೆಯವರು ನಗರದ ಪ್ರಮುಖ ರಸ್ತೆಯಲ್ಲಿಯೇ ಅನೈರ್ಮಲ್ಯ ವಾತಾವರಣ ನಿರ್ಮಾಣವಾ ಗಿದ ರೂ ಯಾವುದೇ ಕ್ರಮಕೈಗೊಳ ದಿರುವುದು ಬೇಸರದ ಸಂಗತಿ. ಸಂಬಂಧಪಟ್ಟವರು ಕೂಡಲೇ ಈ ಮ್ಯಾನ್ ಹೋಲ್ಅನ್ನು ಸರಿಪಡಿಸಬೇಕಿದೆ.
-ಆರ್.ಯಶಸ್, ಮೈಸೂರು.
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…