ಓದುಗರ ಪತ್ರ
ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯರು ಹಲವಾರು ಬಾರಿ ಹೆಗ್ಗಡದೇವನಕೋಟೆ ತಾಲ್ಲೂಕಿನ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗರ್ಭಿಣಿಯರು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆತರಲೂ ತೊಂದರೆಯಾಗುತ್ತಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಂಬಂಧ ಕ್ರಮ ವಹಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
–ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…
ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ…
ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…
ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…