ಓದುಗರ ಪತ್ರ
ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯರು ಹಲವಾರು ಬಾರಿ ಹೆಗ್ಗಡದೇವನಕೋಟೆ ತಾಲ್ಲೂಕಿನ ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗರ್ಭಿಣಿಯರು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆತರಲೂ ತೊಂದರೆಯಾಗುತ್ತಿದೆ. ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಂಬಂಧ ಕ್ರಮ ವಹಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
–ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…