ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪ ಹಾದುಹೋಗಿರುವ ಹೆಬ್ಬಾಳು ಜಲಾಶಯದ ನಾಲೆಯ ಸೇತುವೆಯ ಮೇಲೆ ಬೃಹತ್ ಗುಂಡಿ ನಿರ್ಮಾಣವಾಗಿದ್ದು, ಸೇತುವೆ ಕುಸಿದು ಬೀಳುವ ಅಪಾಯದಲ್ಲಿದೆ.
ಈ ಸೇತುವೆ ಮೇಲೆ ನಿರ್ಮಾಣವಾಗಿರುವ ಈ ಗುಂಡಿ, ಮಳೆ ಬಂದಂತೆಲ್ಲ ಹಂತ ಹಂತವಾಗಿ ಕುಸಿಯುತ್ತಿದೆ. ಇಷ್ಟಿದ್ದರೂ ಜನರು ವಿಧಿ ಇಲ್ಲದೇ ಇದೇ ಸೇತುವೆ ಮೇಲೆ ಓಡಾಡಬೇಕಿದೆ.
ಈ ಗುಂಡಿ ನಿರ್ಮಾಣವಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದಾಗ್ಯೂ ಗ್ರಾಮ ಪಂಚಾಯಿತಿಯವರು ಗುಂಡಿ ಮುಚ್ಚುವುದಕ್ಕಾಗಲಿ ಅಥವಾ ಸೇತುವೆಯನ್ನು ಮರು ನಿರ್ಮಾಣ ಮಾಡುವುದಕ್ಕಾಗಲಿ ಮುಂದಾಗಿಲ್ಲ. ಈ ಬಗ್ಗೆ ನೀರಾವರಿ ಇಲಾಖೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲ ದಿನಗಳಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು, ಸಂಪೂರ್ಣ ಸೇತುವೆಯೇ ಕುಸಿದು ಬೀಳುವ ಅಪಾಯದಲ್ಲಿದೆ. ಆದ್ದರಿಂದ ಈ ಕ್ಷೇತ್ರದ ಶಾಸಕರು ಇದರ ಬಗ್ಗೆ ಗಮನಹರಿಸಿ ಸೇತುವೆಯನ್ನು ದುರಸ್ತಿ ಮಾಡಿಸಿಕೊಡಬೇಕಿದೆ.
-ಸಿದ್ಧಲಿಂಗೇಗೌಡ, ಹೈರಿಗೆ, ಎಚ್.ಡಿ.ಕೋಟೆ ತಾ
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…
2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…